ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ 
ದೇಶ

ಓವೈಸಿ ವಿರುದ್ಧ ರಾಷ್ಟ್ರವ್ಯಾಪ್ತಿ ಹೋರಾಟಕ್ಕೆ ಶ್ರೀರಾಮ ಸೇನೆ ನಿರ್ಧಾರ?

ಕುತ್ತಿಗೆ ಮೇಲೆ ಚೂರಿ ಇಟ್ಟರು 'ಭಾರತ್ ಮಾತಾಕಿ ಜೈ' ಎಂದು ಹೇಳುವುದಿಲ್ಲ ಎಂದು ಹೇಳಿದ್ದ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿಕೆಗೆ ಶ್ರೀರಾಮ ಸೇನೆ ಕಿಡಿಕಾರಿದ್ದು...

ನವದೆಹಲಿ: ಕುತ್ತಿಗೆ ಮೇಲೆ ಚೂರಿ ಇಟ್ಟರು 'ಭಾರತ್ ಮಾತಾಕಿ ಜೈ' ಎಂದು ಹೇಳುವುದಿಲ್ಲ ಎಂದು ಹೇಳಿದ್ದ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿಕೆಗೆ ಶ್ರೀರಾಮ ಸೇನೆ ಕಿಡಿಕಾರಿದ್ದು, ಇದೀಗ ಓವೈಸಿ ವಿರುದ್ಧ ರಾಷ್ಟ್ರವ್ಯಾಪ್ತಿ ಹೋರಾಟ ನಡೆಸಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಓವೈಸಿ ಹೇಳಿಕೆ ಸಂಬಂಧ ರಾಯಚೂರಿನಲ್ಲಿ ಹೇಳಿಕೆ ನೀಡಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು, ಓವೈಸಿಯವರ ವರ್ತನೆ ಹಾಗೂ ಅವರ ಬೆಂಬಲಿಗರನ್ನು ನಾವು ವಿರೋಧಿಸುತ್ತೇವೆ. ಓವೈಸಿ ಹೇಳಿಕೆಯನ್ನು ನಾವು ಸಹಿಸುವುದಿಲ್ಲ. ಹೇಳಿಕೆ ನಿಜಕ್ಕೂ ದೇಶದ ಸಮಗ್ರತೆ ವಿರುದ್ಧವಾದದ್ದು, ಈ ಕೂಡಲೇ ಅವರನ್ನು ಸಂಸತ್ತಿನಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಭಾರತದ ಪರ ಘೋಷಣೆ ಕೂಗಲು ಸಾಧ್ಯವಿಲ್ಲ ಎಂದು ಹೇಳುತ್ತಿರುವ ಓವೈಸಿಯವರನ್ನು ದೇಶ ಬಿಡಲು ಹೇಳಿ. ಅವರಿಗೆ ಎಲ್ಲಿ ಇಷ್ಟವಾಗುತ್ತದೆಯೋ ಅಲ್ಲೇ ಹೋಗಲಿ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಓವೈಸಿ ಹೇಳಿಕೆಯನ್ನು ವಿರೋಧಿಸಿರುವ ಶ್ರೀರಾಮ ಸೇನೆಯು ಇದೀಗ ಓವೈಸಿ ವಿರುದ್ಧ ರಾಷ್ಟ್ರದ ಪ್ರಮುಖ ನಗರದಲ್ಲಿ ಪ್ರತಿಭಟನೆ ಹಾಗೂ ಹೋರಾಟ ನಡೆಸಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಸಭೆಯಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು ಕೇಳಿಬಂದಿವೆ. ಪ್ರತಿಯೊಬ್ಬರೂ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗವಂತಾಗಬೇಕು. ಯುವಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಇದು ಪೂರಕವಾಗಬೇಕೆಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಓವೈಸಿ, ನನ್ನ ಕುತ್ತಿಗೆ ಮೇಲೆ ಚೂರಿ ಇಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ. ಘೋಷಣೆಯನ್ನು ಕೂಗಿ, ದೇಶಭಕ್ತಿ ಸಾಬೀತುಪಡಿಸಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಹಾಗಾಗಿ ಕಾನೂನು ಉಲ್ಲಂಘನೆಯ ಪ್ರಶ್ನೆ ಇಲ್ಲಿ ಹುಟ್ಟುವುದಿಲ್ಲ. ಈ ನಿಲುವಿಗೆ ನಾನು ಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಘೋಷಣೆ ಕೂಗುವುದಿಲ್ಲ.

ನಾನು ಈ ದೇಶದ ಸಂವಿಧಾನವನ್ನು ಪಾಲಿಸುತ್ತೇನೆ. ಆದರೆ, ಘೋಷಣೆ ಕೂಗುವಂತೆ ಯಾರಿಗೂ ಒತ್ತಾಯ ಮಾಡುವುದಿಲ್ಲ. ಆರ್ ಎಸಎಸ್ ತಮ್ಮ ಸಿದ್ಧಾಂತವನ್ನು ಜನರ ಮೇಲೆ ಹೇರಲು ಯತ್ನಿಸುತ್ತಿದೆ. ಈ ವಿಚಾರವಾಗಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ನಾನಂತೂ ಘೋಷಣೆ ಕೂಗುವುದಿಲ್ಲ ಈಗ ಏನು ಮಾಡುತ್ತೀರಿ ಭಾಗವತ್ ಸಾಬ್ ಎಂದು ಓವೈಸಿ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT