ಕೈಲಾಶ್ ವಿಜಯ್ ವರ್ಗೀಯ 
ದೇಶ

ಉತ್ತರಾಖಂಡದಲ್ಲಿ ರಾಜಕೀಯ ಅಸ್ಥಿರತೆ: ಚುನಾವಣೆ ಎದುರಿಸಲು ಸಿದ್ಧ ಎಂದ ಬಿಜೆಪಿ ನಾಯಕ

ಉತ್ತರಾಖಂಡದಲ್ಲಿ ಹೊಸ ಸರ್ಕಾರದ ರಚನೆಗಾಗಿ ಚುನಾವಣೆ ಎದುರಿಸಲು ಸಿದ್ಧ ಎಂದು ಬಿಜೆಪಿ ನಾಯಕ ಕೈಲಾಶ್...

ನವದೆಹಲಿ: ಉತ್ತರಾಖಂಡದಲ್ಲಿ ಹೊಸ ಸರ್ಕಾರದ ರಚನೆಗಾಗಿ ಚುನಾವಣೆ ಎದುರಿಸಲು ಸಿದ್ಧ ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಹೇಳಿದ್ದಾರೆ. 
ಕಾಂಗ್ರೆಸ್ ನ ಹರೀಶ್ ರಾವತ್ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಂಡಿದೆ. ಹಾಗಾಗಿ, ಹೊಸ ಸರ್ಕಾರ ರಚನೆಯಾಗಬೇಕಿದೆ ಎಂದು ಅವರು ಹೇಳಿದ್ದಾರೆ. 
ಹೊಸ ಸರ್ಕಾರದ ರಚನೆಗಾಗಿ ಬಿಜೆಪಿ ಚುನಾವಣೆ ಎದುರಿಸಲು ಸಿದ್ಧವಿದೆ. ಈ ಸಂಬಂಧ ಉತ್ತರಾಖಂಡದ 35 ಶಾಸಕರು ಬಿಜೆಪಿ ಅಧ್ಯಕ್ಷರನ್ನು ಇಂದು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. 
ಈಗಾಗಲೇ ರಾಜ್ಯಪಾಲರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆ ಕುರಿತು ಮಾತುಕತೆ ನಡೆಸಲಾಗಿದೆ. ಈ ಸಂಬಂಧ ಅವರು, ಸರ್ಕಾರದ ವರದಿ ಕೇಳಿದ್ದಾರೆ ಎಂದು ಕೈಲಾಶ್ ತಿಳಿಸಿದ್ದಾರೆ. 
ಭಿನ್ನಮತೀಯ ಕಾಂಗ್ರೆಸ್ ಶಾಸಕರನ್ನು ಸೆಳೆದು ಮುಖ್ಯಮಂತ್ರಿ ಹರೀಶ್ ರಾವತ್ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ನಡೆಸಿದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದ್ದಾರೆ. 
70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ 36, ಬಿಜೆಪಿ 28 ಶಾಸಕರನ್ನು ಹೊಂದಿದೆ. ಪಿಡಿಎಫ್ ಮೈತ್ರಿಕೂಟ 6 ಸದಸ್ಯರನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT