ಹರಿಶ್ ರಾವತ್ 
ದೇಶ

ಬಹುಮತ ಸಾಬೀತುಪಡಿಸುವಂತೆ ಉತ್ತರಾಖಂಡ್ ಸಿಎಂ ರಾವತ್ ಗೆ ರಾಜ್ಯಪಾಲರ ಸೂಚನೆ

ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉತ್ತರಾಖಂಡ್ ರಾಜ್ಯಪಾಲ ಕೆ.ಕೆ.ಪೌಲ್ ಅವರು ಶನಿವಾರ...

ಡೆಹ್ರಾಡೂನ್: ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉತ್ತರಾಖಂಡ್ ರಾಜ್ಯಪಾಲ ಕೆ.ಕೆ.ಪೌಲ್ ಅವರು ಶನಿವಾರ ಮುಖ್ಯಮಂತ್ರಿ ಹರಿಶ್ ರಾವತ್ ಅವರಿಗೆ ಸೂಚಿಸಿದ್ದಾರೆ.
ಕಾಂಗ್ರೆಸ್ ನ ಒಂಬತ್ತು ಶಾಸಕರು ಬಂಡಾಯವೆದ್ದ ಹಿನ್ನೆಲೆಯಲ್ಲಿ ಉತ್ತರಾಖಂಡನ್ ನಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಮಾರ್ಚ್ 28ರೊಳಗೆ ಬಹುಮತ ಸಾಬೀತುಪಡಿಸುವಂತೆ ರಾವತ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರು ಸೂಚಿಸಿದ್ದಾರೆ.
ಶಾಸಕರ ಬಂಡಾಯದ ಹಿನ್ನೆಲೆಯಲ್ಲಿ ತೀವ್ರ ಇಕ್ಕಟ್ಟಿಗೆ ಸಿಲುಕಿರುವ ಸಿಎಂ ಹರಿಶ್ ರಾವತ್ ಅವರು ನಾಳೆ ಕಾಂಗ್ರೆಸ್ ಹೈಕಮಾಂಡ್ ನ್ನು ಭೇಟಿ ಮಾಡಿ, ಮುಂದಿನ ಕ್ರಮದ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. 
ಇದಕ್ಕು ಮುನ್ನ ಮಾತನಾಡಿದ್ದ ಹರಿಶ್ ರಾವತ್, ವಿಧಾನಸಭೆಯಲ್ಲಿ ನಾನು ಇನ್ನೂ ಸಂಪೂರ್ಣ ಬಹುಮತ ಹೊಂದಿದ್ದೇನೆ ಎಂಬ ವಿಶ್ವಾಸವಿದೆ ಮತ್ತು ಸದನದಲ್ಲಿ ಅದನ್ನು ಸಾಬೀತುಪಡಿಸುತ್ತೇನೆ ಎಂದಿದ್ದರು. ಅಲ್ಲದೆ ಒಂಬತ್ತು ಬಂಡಾಯ ಶಾಸಕರ ಪೈಕಿ ಐವರು ತಮ್ಮ ಸಂಪರ್ಕದಲ್ಲಿದು, ಅವರು ಸರ್ಕಾರ ತೊರೆಯುವುದಿಲ್ಲ ಎಂದು ಹೇಳಿದ್ದರು.
ಉತ್ತರಾಖಂಡ ವಿಧಾನಸಭೆಯು ಒಟ್ಟು 70 ಸದಸ್ಯರನ್ನು ಹೊಂದಿದೆ. ಇದರಲ್ಲಿ ಕಾಂಗ್ರೆಸ್‌  36 ಸ್ಥಾನಗಳನ್ನು ಪಡೆದು ಅಧಿಕಾರದ ಗದ್ದುಗೆ ಹಿಡಿದಿದೆ. ಬಿಜೆಪಿ 28 ಸ್ಥಾನಗಳನ್ನು ಗೆದ್ದಿತ್ತು. ಈಗ ಕಾಂಗ್ರೆಸ್‌ನ 9 ಶಾಸಕರು ಬಿಜೆಪಿಗೆ ಬೆಂಬಲ ಸೂಚಿಸಿರುವುದರಿಂದ ಕಾಂಗ್ರೆಸ್‌ ಪಕ್ಷ ಬಹುಮತ ಕಳೆದುಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ ಬಂಡಾಯ ಕಾಂಗ್ರೆಸ್ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ಮುಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT