ಜಮ್ಮುವಿನಲ್ಲಿ ಭಾರೀ ಹಿಮಪಾತ: 1 ಯೋಧ ಕಣ್ಮರೆ (ಸಂಗ್ರಹ ಚಿತ್ರ) 
ದೇಶ

ಜಮ್ಮುವಿನಲ್ಲಿ ಭಾರೀ ಹಿಮಪಾತ: ಓರ್ವ ಯೋಧ ಕಣ್ಮರೆ

ಜಮ್ಮ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಭಾರೀ ಹಿಮಪಾತ ಸಂಭವಿಸಿದ್ದು, ಹಿಮಪಾತದಲ್ಲಿ ಓರ್ವ ಯೋಧ ಕಣ್ಮರೆಯಾಗಿರುವುದಾಗಿ ವರದಿಗಳು ತಿಳಿಸಿವೆ...

ನವದೆಹಲಿ: ಜಮ್ಮ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಭಾರೀ ಹಿಮಪಾತ ಸಂಭವಿಸಿದ್ದು, ಹಿಮಪಾತದಲ್ಲಿ ಓರ್ವ ಯೋಧ ಕಣ್ಮರೆಯಾಗಿರುವುದಾಗಿ ವರದಿಗಳು ತಿಳಿಸಿವೆ.

ಕೆಲವು ದಿನಗಳ ಹಿಂದಷ್ಟೇ ಸಿಯಾಚಿನ್ ಗಡಿಯಲ್ಲಿ ಭೀಕರ ಹಿಮಪಾತ ಸಂಭವಿಸಿತ್ತು. ಹಿಮಪಾತದಲ್ಲಿ ಕರ್ನಾಟಕ ಮೂಲದ ಹನುಮಂತಪ್ಪ ಸೇರಿ 10 ಮಂದಿ ಹುತಾತ್ಮರಾಗಿದ್ದರು.
ಇದೀಗ ಮತ್ತೆ ಇಂತಹದ್ದೇ ಘಟನೆ ಸಂಭವಿಸಿದ್ದು, ಹಿಮಪಾತದಲ್ಲಿ ಇಬ್ಬರು ಯೋಧರು ಕಣ್ಮರೆಯಾಗಿದ್ದರು. ಕಾರ್ಯಾಚರಣೆ ನಡೆಸಿದ್ದ ಸಿಬ್ಬಂದಿಗಳು ಓರ್ವ ಯೋಧನನ್ನು ಸಂರಕ್ಷಣೆ ಮಾಡಿದ್ದಾರೆ. ಇದೀಗ ಮತ್ತೊಬ್ಬ ಯೋಧನಿಗಾಗಿ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆಂದು ತಿಳಿದುಬಂದಿದೆ.

ಮಾರ್ಚ್ 17 ರಂದು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ 17,500 ಅಡಿ ಎತ್ತರದಲ್ಲಿ ಇಬ್ಬರು ಯೋಧರು ಗಡಿ ಕಾಯುತ್ತಿದ್ದರು ಈ ವೇಳೆ ಹಿಮಪಾತ ಸಂಭವಿಸಿದೆ. ಹಿಮಪಾತದಲ್ಲಿ ಇಬ್ಬರೂ ಯೋಧರು ಕಣ್ಮರೆಯಾಗಿದ್ದರು. ಇದೀಗ ಓರ್ವ ಯೋಧನನ್ನು ಸಂರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬ ಯೋಧನಿಗಾಗಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಮಹಿಳಾ ಮೀಸಲಾತಿ ಮಸೂದೆ ಅಲ್ಲ, ಸಂವಿಧಾನದ ಮೇಲೆ ಮನುವಾದ ಹೇರುವ ಮಸೂದೆ: ರಾಹುಲ್ ಗಾಂಧಿ

TCS 'ಲವ್ ಜಿಹಾದ್' ಪ್ರಕರಣದ ಸಂಪೂರ್ಣ ಮಾಡ್ಯೂಲ್ ಅನ್ನೇ ಭೇದಿಸುತ್ತೇವೆ: ಮಹಾ ಸಿಎಂ ಫಡ್ನವೀಸ್

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

ಕಾಳಿ ಮಾತೆಯ ಬಣ್ಣ ಕಪ್ಪು: ಪ್ರಧಾನಿ ನರೇಂದ್ರ ಮೋದಿಯ 'ಕಾಲ ಟಿಕಾ' ಟೀಕೆ ವಿರುದ್ಧ ಕನ್ನಿಮೋಳಿ ಆಕ್ರೋಶ!

SCROLL FOR NEXT