ಸಾಂದರ್ಭಿಕ ಚಿತ್ರ 
ದೇಶ

ಜೆಎನ್ ಯುನಲ್ಲಿ ಮನುಸ್ಮೃತಿ ಸುಟ್ಟ ಪ್ರಕರಣ: 5 ವಿದ್ಯಾರ್ಥಿಗಳಿಗೆ ನೋಟಿಸ್

ಜವಾಹಾರ್ ಲಾಲ್ ನೆಹರು ವಿಶ್ವ ವಿದ್ಯಾಲಯ ಆವರಣದಲ್ಲಿ ಪ್ರಾಚೀನ ಗ್ರಂಥ ಮನುಸ್ಮೃತಿಯ ಕೆಲವು ಪುಟಗಳನ್ನು ಸುಟ್ಟು ಹಾಕಿದ...

ನವದೆಹಲಿ: ಜವಾಹಾರ್ ಲಾಲ್ ನೆಹರು ವಿಶ್ವ ವಿದ್ಯಾಲಯ ಆವರಣದಲ್ಲಿ ಪ್ರಾಚೀನ ಗ್ರಂಥ ಮನುಸ್ಮೃತಿಯ ಕೆಲವು ಪುಟಗಳನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ವಿದ್ಯಾರ್ಥಿಗಳಿಗೆ ಜೆಎನ್ ಯು ಆಡಳಿತ ಮಂಡಳಿ ನೋಟಿಸ್ ಜಾರಿ ಮಾಡಿದೆ.
ಶನಿವಾರ ಐವರು ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಮಾರ್ಚ್ 8 ರಂದು ಸಂಜೆ 6.30ರ ಸುಮಾರಿಗೆ ವಿಶ್ವವಿದ್ಯಾಲಯದ ಆವರಣದಲ್ಲಿ ಮನುಸ್ಮೃತಿಯ ಕೆಲವು ಪುಟಗಳನ್ನು ಸುಟ್ಟ ಘಟನೆ ನಡೆದಿತ್ತು ಎಂದು ಭದ್ರತಾ ವಿಭಾಗದ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ವಿದ್ಯಾರ್ಥಿ ಮೇಲ್ವಿಚಾರಕ ಅಧಿಕಾರಿಯು ವಿದ್ಯಾರ್ಥಿಗಳಿಗೆ ಕಳುಹಿಸಿದ ನೋಟಿಸಿನಲ್ಲಿ ಈ ರೀತಿ ತಿಳಿಸಲಾಗಿದೆ. ಈ ಘಟನೆಯಲ್ಲಿ ನಿಮ್ಮ ಪಾತ್ರವೇನು ಎಂಬುದನ್ನು ಮಾರ್ಚ್ 21ರ ಒಳಗಾಗಿ ತಿಳಿಸಬೇಕು. ಘಟನೆಯಲ್ಲಿ ನಿಮ್ಮ ಪಾತ್ರವಿಲ್ಲವಾದಲ್ಲಿ ಸಾಬೀತುಪಡಿಸುವ ಸಾಕ್ಷ್ಯಗಳನ್ನು ಅಧಿಕಾರಿಗೆ ಒದಗಿಸಬೇಕು ಎಂದು ನೋಟಿಸ್ ಹೇಳಿದೆ. 
ಮನುಸ್ಮೃತಿಯ ಈ ಭಾಗಗಳು ಮಹಿಳೆಯರನ್ನು ಅವಮಾನಿಸುತ್ತವೆ ಎಂದು ಆರೋಪಿಸಿ ಎಬಿವಿಪಿಯ ಐವರು ಬಂಡಾಯ ಸದಸ್ಯರು ಎಐಎಸ್ ಎ ಮತ್ತು ಎನ್ ಎಸ್ ಯುಐ ಸಂಘಟನೆಯ ಸದಸ್ಯರ ಜತೆ ಸೇರಿಕೊಂಡು ಮನುಸ್ಮೃತಿಯ ಕೆಲವು ಪುಟಗಳನ್ನು ಸುಟ್ಟು ಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT