ಇಸ್ತಾಂಬುಲ್'ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 4 ಸಾವು, 36 ಗಾಯ (ಸಾಂದರ್ಭಿಕ ಚಿತ್ರ) 
ದೇಶ

ಇಸ್ತಾಂಬುಲ್'ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 4 ಸಾವು, 36 ಗಾಯ

ಇಸ್ತಾಂಬುಲ್ ನ ಹೃದಯ ಭಾಗವೆಂದೇ ಹೇಳಲಾಗುವ ಮಾರುಕಟ್ಟೆ ಪ್ರದೇಶದ ಮೇಲೆ ಉಗ್ರರು ನಡೆಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿ 36ಕ್ಕೂ ಹೆಚ್ಚು ಮಂದಿ...

ಇಸ್ತಾಂಬುಲ್: ಇಸ್ತಾಂಬುಲ್ ನ ಹೃದಯ ಭಾಗವೆಂದೇ ಹೇಳಲಾಗುವ ಮಾರುಕಟ್ಟೆ ಪ್ರದೇಶದ ಮೇಲೆ ಉಗ್ರರು ನಡೆಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿ 36ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಇಸ್ತಾಂಬುಲ್ ನ ಇಸ್ತಿಕ್ ಲಾಲ್ ಕಡ್ಡೆಸಿ ರಸ್ತೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಈ ವರೆಗೂ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ, ಕುರ್ದಿಷ್ ಬಂಡುಕೊರರು ದಾಳಿ ನಡೆಸಿರಬಹುದೆಂದು ಅನುಮಾನಗಳು ವ್ಯಕ್ತವಾಗುತ್ತಿವೆ ಎನ್ನಲಾಗಿದೆ.
ದಾಳಿಯನ್ನು ಇಸಿಸ್ ಉಗ್ರ ಸಂಘಟನೆಯ ಸದಸ್ಯರು ನಡೆಸಿರಬಹುದೆಂದು ಶಂಕೆಗಳು ವ್ಯಕ್ತವಾಗುತ್ತಿವನೆ. ಆದರೆ, ತನಿಖೆ ನಡೆಸಲಾಗುತ್ತಿದೆ ಎಂದು ಇಸ್ರೇಲ್ ಪ್ರಧಾನಮಂತ್ರಿ ಹೇಳಿದ್ದಾರೆ.

ಆತ್ಮಾಹುತಿ ಬಾಂಬರ್ ಗಳು ಹೆಚ್ಚು ಜನರಿರುವ ಪ್ರದೇಶದ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದ್ದರು. ಆದರೆ, ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದರಿಂದ ಅದು ಸಾಧ್ಯವಾಗಿರಿಲಿಲ್ಲ. ಹೀಗಾಗಿ ತಾವು ನಿಂತಿದ್ದ ಸ್ಥಳದಲ್ಲಿಯೇ ಬಾಂಬ್ ಸ್ಫೋಟಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ಬಾಂಬ್ ಸ್ಫೋಟಿಸಿಕೊಂಡ ಉಗ್ರರು ಸಿರಿಯಾ ಗಡಿಯಲ್ಲಿ ದಕ್ಷಿಣದ ಗಾಜಿಯಾನ್ಟೆಪ್ ಮೂಲದವರಾಗಿದ್ದಾರೆಂದು ತಿಳಿದುಬಂದಿದ್ದು, ಈ ಬಗ್ಗೆ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಅಂಕಾರಾದಲ್ಲಿಯೂ ಅತ್ಮಾಹುತಿ ಬಾಂಬ್ ದಾಳಿ ನಡೆದಿತ್ತು. ಇದರಂತೆ ಕಳೆದ ಜುಲೈ ತಿಂಗಳ ಬಳಿಕ ಇದು 5ನೇ ಬಾಂಬ್ ದಾಳಿಯಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT