ಹಿಮಪಾತದಲ್ಲಿ ಕಣ್ಮರೆಯಾಗಿದ್ದ ಯೋಧನ ಮೃತದೇಹ ಪತ್ತೆ 
ದೇಶ

ಹಿಮಪಾತದಲ್ಲಿ ಕಣ್ಮರೆಯಾಗಿದ್ದ ಯೋಧನ ಮೃತದೇಹ ಪತ್ತೆ

ಜಮ್ಮ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಕಣ್ಮರೆಯಾಗಿದ್ದ ಯೋಧನ ಮೃತದೇಹವನ್ನು ಸೇನಾ ರಕ್ಷಣಾ ತಂಡವು ಪತ್ತೆ ಹಚ್ಚಿದ್ದು...

ನವದೆಹಲಿ: ಜಮ್ಮ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಕಣ್ಮರೆಯಾಗಿದ್ದ ಯೋಧನ ಮೃತದೇಹವನ್ನು ಸೇನಾ ರಕ್ಷಣಾ ತಂಡವು ಪತ್ತೆ ಹಚ್ಚಿದ್ದು ಮೃತದೇಹವನ್ನು ಭಾನುವಾರ ಹೊರತೆಗೆದಿದ್ದಾರೆಂದು ತಿಳಿದುಬಂದಿದೆ.

ಮಾರ್ಚ್ 17 ರಂದು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ 17,500 ಅಡಿ ಎತ್ತರದಲ್ಲಿ ಇಬ್ಬರು ಯೋಧರು ಗಡಿ ಕಾಯುತ್ತಿದ್ದರು ಈ ವೇಳೆ ಹಿಮಪಾತ ಸಂಭವಿಸಿತ್ತು. ಹಿಮಪಾತದಲ್ಲಿ ಇಬ್ಬರು ಯೋಧರು ಕಣ್ಮರೆಯಾಗಿದ್ದರು. ನಂತರ ಓರ್ವ ಯೋಧನನ್ನು ಸಂರಕ್ಷಿಸಲಾಗಿತ್ತು. ಮತ್ತೊಬ್ಬ ಯೋಧನಿಗಾಗಿ ಸೇನಾ ರಕ್ಷಣಾ ಪಡೆ ಕಾರ್ಯಾಚರಣೆಯನ್ನು ಮುಂದುವರೆಸಿತ್ತು.

ಕಳೆದ 3 ದಿನಗಳಿಂದ ಪ್ರತಿಕೂಲ ಹವಾಮಾನದ ಕಾರಣ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿತ್ತು. ಇದರಂತೆ ನಿನ್ನೆ ಶ್ವಾನಪಡೆ, ರಾಡಾರ್ ಹಾಗೂ ಲೋಹಶೋಧಕ ಉಪಕರಣಗಳನ್ನು ಬಳಸುವ ಮೂಲಕ ರಕ್ಷಣಾ ಪಡೆ ಸಿಬ್ಬಂದಿಗಳು ಯೋಧನನ್ನು ಪತ್ತೆಹಚ್ಚಿದ್ದರು.

ಸತತ ಮೂರನೇ ದಿನ ನಡೆದ ಕಾರ್ಯಾಚರಣೆಯಲ್ಲಿ 12 ಅಡಿ ಆಳದಲ್ಲಿ ಸಿಲುಕಿದ್ದ ಯೋಧ ಪಿ. ವಿಜಯ್ ಕುಮಾರ್ ಅವರ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಮಾಡಿದ್ದಾರೆ.

ಹುತಾತ್ಮ ಯೋಧ ಕೆ. ವಿಜಯ್ ಕುಮಾರ್ ಅವರು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಲ್ಲಾರಾಮಪುರಂ ಗ್ರಾಮದವರಾಗಿದ್ದು, ಷೋಷಕರು ಹಾಗೂ ಇಬ್ಬರು ತಂಗಿಯರನ್ನು ಅಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT