ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹಾಗೂ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ 
ದೇಶ

ರಾಷ್ಟ್ರೀಯತೆ ಬಗ್ಗೆ ಜೇಟ್ಲಿಯಿಂದ ತಿಳಿದುಕೊಳ್ಳುವ ಅಗತ್ಯವಿಲ್ಲ: ಯೆಚೂರಿ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರಿಂದ ರಾಷ್ಟ್ರೀಯತೆ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿಲ್ಲ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರು ಹೇಳಿದ್ದಾರೆ...

ಕೋಲ್ಕತಾ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರಿಂದ ರಾಷ್ಟ್ರೀಯತೆ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿಲ್ಲ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರು ಹೇಳಿದ್ದಾರೆ.

ರಾಷ್ಚ್ರೀಯತೆ ಬಗ್ಗೆ ಮಾತನಾಡುತ್ತಿರುವ ಬಿಜೆಪಿಯ ಮಾತುಗಳು ಒಂದು ರೀತಿಯಲ್ಲಿ ನೀವು ನಮ್ಮೊಂದಿಗಿರಬೇಕು ಇಲ್ಲವೇ ಭಯೋತ್ಪಾದಕರ ಜೊತೆಗಿರಬೇಕೆನ್ನುವ ಜಾರ್ಜ್ ಬುಷ್ ಪ್ರತಿಪಾದನೆಯಂತಿದೆ. ಬಿಜೆಪಿ ಪಕ್ಷಕ್ಕೆ ಯಾರು ಬೆಂಬಲ ನೀಡುತ್ತಾರೊ ಅವರು ರಾಷ್ಟ್ರೀಯವಾದಿಗಳು ಇಲ್ಲವೇ ಅವರು ರಾಷ್ಟ್ರವಿರೋಧಿಗಳೆಂದು ಬಣ್ಣಿಸಲಾಗುತ್ತಿದೆ. ನಮಗೆ ಬಿಜೆಪಿಯಿಂದ ರಾಷ್ಟ್ರೀಯತೆ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ಹಿಂದಷ್ಚೇ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ್ದ ಜೇಟ್ಲಿಯವರು, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ರಾಷ್ಟ್ರೀಯತೆ ಎಂಬುದು ಎರಡೂ ಒಟ್ಟಿಗೆ ಸಾಗುವಂತಹದ್ದು. ಭಾರತ ಸಂವಿಧಾನದಲ್ಲಿ ಅಭಿವ್ಯಕ್ತಿಸುವ ಹಾಗೂ ಅಸಮ್ಮತಿ ವ್ಯಕ್ತಪಡಿಸುವ ಹಕ್ಕು ಇದೆ. ಆದರೆ, ನಾಶಕ್ಕೆ ಸ್ವಾತಂತ್ರ್ಯ ನೀಡುವುದಿಲ್ಲ, ರಾಷ್ಟ್ರೀಯ ಸಿದ್ಧಾಂತಗಳು ನಮ್ಮ ನಂಬಿಕೆ ಹಾಗೂ ತತ್ವಶಾಸ್ತ್ರಗಳನ್ನು ಮಾರ್ಗದರ್ಶಿಸುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT