ಶ್ರೀಶಾಂತ್ 
ದೇಶ

ಕೇರಳ ವಿಧಾನಸಭೆ ಚುನಾವಣೆ: ಮಾಜಿ ಕ್ರಿಕೆಟಿಗ ಶ್ರೀಶಾಂತ್ ಬಿಜೆಪಿಯಿಂದ ಸ್ಪರ್ಧೆ ಸಾಧ್ಯತೆ

ಮುಂಬರುವ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮಾಜಿ ಕ್ರಿಕೆಟಿಗ, ವೇಗದ ಬೌಲರ್ ಎಸ್. ಶ್ರೀಶಾಂತ್ ಅವರನ್ನು...

ಕೊಚ್ಚಿ: ಮುಂಬರುವ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮಾಜಿ ಕ್ರಿಕೆಟಿಗ, ವೇಗದ ಬೌಲರ್ ಎಸ್. ಶ್ರೀಶಾಂತ್ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸಂಬಂಧ ಪಕ್ಷ ಈಗಾಗಲೇ ಶ್ರೀಶಾಂತ್ ಅವರನ್ನು ಸಂಪರ್ಕಿಸಿದ್ದು, ಆದರೆ ಅವರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ.

ಶ್ರೀಶಾಂತ್ ಒಪ್ಪಿಗೆ ನೀಡಿದ ಪಕ್ಷದಲ್ಲಿ ಅಬಕಾರಿ ಸಚಿವ ಕೆ. ಬಾಬು ವಿರುದ್ಧ ತ್ರಿಪ್ಪುನಿತುರಾದಲ್ಲಿ ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿದೆ ಎಂದು ಮಾಹಿತಿ ಲಭಿಸಿದೆ. ಶ್ರೀಶಾಂತ್ ಕೂಡ ಮೇಲ್ನೋಟಕ್ಕೆ ಮನಸ್ಸು ಮಾಡಿದ್ದು, ಇದರಿಂದಾಗುವ ಆಗು-ಹೋಗುಗಳ ಬಗ್ಗೆ ಚಿಂತಿಸಿ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ವಿಚಾರವನ್ನು ಕುಟುಂಬದ ಸದಸ್ಯರೊಡನೆ ಮಾತುಕತೆ ನಡೆಸಿದ ನಂತರ ತಿಳಿಸುವುದಾಗಿ ಶ್ರೀಶಾಂತ ಹೇಳಿದ್ದಾರೆ. 2013ರಲ್ಲಿ ನಡೆದ ಐಪಿಎಲ್ 6ನೇ ಆವೃತಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಡಿಯಲ್ಲಿ ಶ್ರೀಶಾಂತ್ ಅವರನ್ನು ಬಂಧಿಸಲಾಗಿತ್ತು. ಆದರೆ ಸೂಕ್ತ ಸಾಕ್ಷ್ಯಾರ ಇಲ್ಲದ ಕಾರಣ ಪ್ರಕರಣವನ್ನು ದೆಹಲಿ ಹೈಕೋರ್ಟ್ ಖುಲಾಸೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದ ಟೆಹ್ರಾನ್, ಸಂಘರ್ಷ ಮತ್ತೆ ಉಲ್ಬಣ

ಬಸ್‌ನಲ್ಲಿ ನಿಧಾನಕ್ಕೆ ಕೈ ಹಾಕಿದ, ಸುಮ್ನೆ ಬಿಡ್ತಿನಾ?: ಕಹಿ ಅನುಭವ ಬಿಚ್ಚಿಟ್ಟ Bigg Boss ರಿಷಾ ಗೌಡ

Video: ಸೋಲಿನ ನಂತರ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ; ಓಡಿ ಬಂದ KKR ಆಟಗಾರ!

ಹೊರ್ಮುಸ್, ಹಣದುಬ್ಬರ, ಮತ್ತು ಚುನಾವಣೆಗಳು: ಸಮಸ್ಯೆಯ ಸುಳಿಯಲ್ಲಿ ಟ್ರಂಪ್ (ಜಾಗತಿಕ ಜಗಲಿ)

ಪ್ರಧಾನಿ ಮೋದಿ ಜೊತೆಗೆ ಗುಟ್ಟಿನ ಮಾತುಕತೆ: ಕೊನೆಗೂ ಬಹಿರಂಗ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

SCROLL FOR NEXT