ರವಿಶಂಕರ್ ಪ್ರಸಾದ್ 
ದೇಶ

ಉದ್ಯೋಗ ಸೃಷ್ಟಿಗಾಗಿ ಗ್ರಾಮಗಳತ್ತ ಬಿಪಿಒ

ನಗರ ಪ್ರದೇಶಗಳಿಗೆ ಯುವಕರ ವಲಸೆಯನ್ನು ತಡೆಗಟ್ಟಲು, ಉದ್ಯೋಗ ಸೃಷ್ಟಿಗಾಗಿ ಬಿಪಿಒ ಗಳನ್ನು ಗ್ರಾಮೀಣ ಪ್ರದೇಶಗಳು, ಸಣ್ಣ ನಗರಗಳತ್ತ ಕೊಂಡೊಯ್ಯಲಾಗುತ್ತಿದೆ...

ನವದೆಹಲಿ: ನಗರ ಪ್ರದೇಶಗಳಿಗೆ ಯುವಕರ ವಲಸೆಯನ್ನು ತಡೆಗಟ್ಟಲು, ಉದ್ಯೋಗ ಸೃಷ್ಟಿಗಾಗಿ ಬಿಪಿಒ ಗಳನ್ನು ಗ್ರಾಮೀಣ ಪ್ರದೇಶಗಳು, ಸಣ್ಣ ನಗರಗಳತ್ತ ಕೊಂಡೊಯ್ಯಲಾಗುತ್ತಿದೆ ಎಂದು ಕೇಂದ್ರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. 
ಬಿಪಿಒ ಗಳನ್ನು ಗ್ರಾಮೀಣ ಪ್ರದೇಶಕ್ಕೆ ಪರಿಚಯಿಸುವುದರಿಂದ ಗ್ರಾಮೀಣ ಪ್ರದೇಶದ ಯುವಕರಿಗೆ ಅವರಿದ್ದಲ್ಲೇ ಉದ್ಯೋಗ ದೊರೆಯುತ್ತದೆ. ಇದರಿಂದಾಗಿ ಯುವಕರು ನಗರ ಪ್ರದೇಶಗಳತ್ತ ವಲಸೆ ಬರುವುದು ಕಡಿಮೆಯಾಗಲಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ. 
ಡಿಜಿಟಲ್ ಇಂಡಿಯಾ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರವಿಶಂಕರ್ ಪ್ರಸಾದ್, ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಗ್ರಾಮೀಣ ಪ್ರದೇಶದಲ್ಲಿ 398 ಕಿಮಿ ವರೆಗೆ ಆಪ್ಟಿಕಲ್ ಫೈಬರ್ ಕೇಬಲ್ ಗಳನ್ನು ಹಾಕಲಾಗಿತ್ತು. ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ 1 ಲಕ್ಷ ಕಿಮಿ ಗೂ ಹೆಚ್ಚು ಆಪ್ಟಿಕಲ್ ಫೈಬರ್ ಕೇಬಲ್ ಗಳನ್ನು ಹಾಕಲಾಗಿದ್ದು, 50 ,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳನ್ನು ತಲುಪಲಾಗಿದೆ ಎಂದು ತಿಳಿಸಿದ್ದಾರೆ. ಮಾಹಿತಿತಂತ್ರಜ್ಞಾನದೊಂದಿಗೆ ಸೇರಿರುವ ಪ್ರತಿಭೆಯಲ್ಲಿ ದೇಶದ ಭವಿಷ್ಯ ಅಡಗಿದೆ, ದೇಶದ ಅಭಿವೃದ್ಧಿಗೆ ಇಂಟರ್ ನೆಟ್ ಬಹುಮುಖ್ಯವಾದ ಸಾಧನ ಎಂದು ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ