ರವಿಶಂಕರ್ ಪ್ರಸಾದ್ 
ದೇಶ

ಉದ್ಯೋಗ ಸೃಷ್ಟಿಗಾಗಿ ಗ್ರಾಮಗಳತ್ತ ಬಿಪಿಒ

ನಗರ ಪ್ರದೇಶಗಳಿಗೆ ಯುವಕರ ವಲಸೆಯನ್ನು ತಡೆಗಟ್ಟಲು, ಉದ್ಯೋಗ ಸೃಷ್ಟಿಗಾಗಿ ಬಿಪಿಒ ಗಳನ್ನು ಗ್ರಾಮೀಣ ಪ್ರದೇಶಗಳು, ಸಣ್ಣ ನಗರಗಳತ್ತ ಕೊಂಡೊಯ್ಯಲಾಗುತ್ತಿದೆ...

ನವದೆಹಲಿ: ನಗರ ಪ್ರದೇಶಗಳಿಗೆ ಯುವಕರ ವಲಸೆಯನ್ನು ತಡೆಗಟ್ಟಲು, ಉದ್ಯೋಗ ಸೃಷ್ಟಿಗಾಗಿ ಬಿಪಿಒ ಗಳನ್ನು ಗ್ರಾಮೀಣ ಪ್ರದೇಶಗಳು, ಸಣ್ಣ ನಗರಗಳತ್ತ ಕೊಂಡೊಯ್ಯಲಾಗುತ್ತಿದೆ ಎಂದು ಕೇಂದ್ರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. 
ಬಿಪಿಒ ಗಳನ್ನು ಗ್ರಾಮೀಣ ಪ್ರದೇಶಕ್ಕೆ ಪರಿಚಯಿಸುವುದರಿಂದ ಗ್ರಾಮೀಣ ಪ್ರದೇಶದ ಯುವಕರಿಗೆ ಅವರಿದ್ದಲ್ಲೇ ಉದ್ಯೋಗ ದೊರೆಯುತ್ತದೆ. ಇದರಿಂದಾಗಿ ಯುವಕರು ನಗರ ಪ್ರದೇಶಗಳತ್ತ ವಲಸೆ ಬರುವುದು ಕಡಿಮೆಯಾಗಲಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ. 
ಡಿಜಿಟಲ್ ಇಂಡಿಯಾ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರವಿಶಂಕರ್ ಪ್ರಸಾದ್, ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಗ್ರಾಮೀಣ ಪ್ರದೇಶದಲ್ಲಿ 398 ಕಿಮಿ ವರೆಗೆ ಆಪ್ಟಿಕಲ್ ಫೈಬರ್ ಕೇಬಲ್ ಗಳನ್ನು ಹಾಕಲಾಗಿತ್ತು. ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ 1 ಲಕ್ಷ ಕಿಮಿ ಗೂ ಹೆಚ್ಚು ಆಪ್ಟಿಕಲ್ ಫೈಬರ್ ಕೇಬಲ್ ಗಳನ್ನು ಹಾಕಲಾಗಿದ್ದು, 50 ,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳನ್ನು ತಲುಪಲಾಗಿದೆ ಎಂದು ತಿಳಿಸಿದ್ದಾರೆ. ಮಾಹಿತಿತಂತ್ರಜ್ಞಾನದೊಂದಿಗೆ ಸೇರಿರುವ ಪ್ರತಿಭೆಯಲ್ಲಿ ದೇಶದ ಭವಿಷ್ಯ ಅಡಗಿದೆ, ದೇಶದ ಅಭಿವೃದ್ಧಿಗೆ ಇಂಟರ್ ನೆಟ್ ಬಹುಮುಖ್ಯವಾದ ಸಾಧನ ಎಂದು ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT