ರವಿಶಂಕರ್ ಪ್ರಸಾದ್ 
ದೇಶ

ಉದ್ಯೋಗ ಸೃಷ್ಟಿಗಾಗಿ ಗ್ರಾಮಗಳತ್ತ ಬಿಪಿಒ

ನಗರ ಪ್ರದೇಶಗಳಿಗೆ ಯುವಕರ ವಲಸೆಯನ್ನು ತಡೆಗಟ್ಟಲು, ಉದ್ಯೋಗ ಸೃಷ್ಟಿಗಾಗಿ ಬಿಪಿಒ ಗಳನ್ನು ಗ್ರಾಮೀಣ ಪ್ರದೇಶಗಳು, ಸಣ್ಣ ನಗರಗಳತ್ತ ಕೊಂಡೊಯ್ಯಲಾಗುತ್ತಿದೆ...

ನವದೆಹಲಿ: ನಗರ ಪ್ರದೇಶಗಳಿಗೆ ಯುವಕರ ವಲಸೆಯನ್ನು ತಡೆಗಟ್ಟಲು, ಉದ್ಯೋಗ ಸೃಷ್ಟಿಗಾಗಿ ಬಿಪಿಒ ಗಳನ್ನು ಗ್ರಾಮೀಣ ಪ್ರದೇಶಗಳು, ಸಣ್ಣ ನಗರಗಳತ್ತ ಕೊಂಡೊಯ್ಯಲಾಗುತ್ತಿದೆ ಎಂದು ಕೇಂದ್ರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. 
ಬಿಪಿಒ ಗಳನ್ನು ಗ್ರಾಮೀಣ ಪ್ರದೇಶಕ್ಕೆ ಪರಿಚಯಿಸುವುದರಿಂದ ಗ್ರಾಮೀಣ ಪ್ರದೇಶದ ಯುವಕರಿಗೆ ಅವರಿದ್ದಲ್ಲೇ ಉದ್ಯೋಗ ದೊರೆಯುತ್ತದೆ. ಇದರಿಂದಾಗಿ ಯುವಕರು ನಗರ ಪ್ರದೇಶಗಳತ್ತ ವಲಸೆ ಬರುವುದು ಕಡಿಮೆಯಾಗಲಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ. 
ಡಿಜಿಟಲ್ ಇಂಡಿಯಾ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರವಿಶಂಕರ್ ಪ್ರಸಾದ್, ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಗ್ರಾಮೀಣ ಪ್ರದೇಶದಲ್ಲಿ 398 ಕಿಮಿ ವರೆಗೆ ಆಪ್ಟಿಕಲ್ ಫೈಬರ್ ಕೇಬಲ್ ಗಳನ್ನು ಹಾಕಲಾಗಿತ್ತು. ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ 1 ಲಕ್ಷ ಕಿಮಿ ಗೂ ಹೆಚ್ಚು ಆಪ್ಟಿಕಲ್ ಫೈಬರ್ ಕೇಬಲ್ ಗಳನ್ನು ಹಾಕಲಾಗಿದ್ದು, 50 ,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳನ್ನು ತಲುಪಲಾಗಿದೆ ಎಂದು ತಿಳಿಸಿದ್ದಾರೆ. ಮಾಹಿತಿತಂತ್ರಜ್ಞಾನದೊಂದಿಗೆ ಸೇರಿರುವ ಪ್ರತಿಭೆಯಲ್ಲಿ ದೇಶದ ಭವಿಷ್ಯ ಅಡಗಿದೆ, ದೇಶದ ಅಭಿವೃದ್ಧಿಗೆ ಇಂಟರ್ ನೆಟ್ ಬಹುಮುಖ್ಯವಾದ ಸಾಧನ ಎಂದು ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT