ಮಹಾರಾಷ್ಟ್ರ ಅಡ್ವೊಕೇಟ್ ಜನರಲ್ ಶ್ರೀಹರಿ ಅಣೆ 
ದೇಶ

ಮರಾಠ್ ವಾಡ ಪ್ರತ್ಯೇಕ ರಾಜ್ಯ ವಿವಾದ: ಮಹಾರಾಷ್ಟ್ರ ಎಜಿ ರಾಜೀನಾಮೆ

ಮರಾಠ್ ವಾಡ ಪ್ರತ್ಯೇಕ ರಾಜ್ಯ ರಚನೆ ಕುರಿತು ಹೇಳಿಕೆ ನೀಡಿ ವಿವಾದ ಉಂಟು ಮಾಡಿದ್ದ ಮಹಾರಾಷ್ಟ್ರ ಅಡ್ವೊಕೇಟ್ ಜನರಲ್(ಎಜಿ) ಶ್ರೀಹರಿ ಅಣೆ ರಾಜೀನಾಮೆ ನೀಡಿದ್ದಾರೆ.

ಮುಂಬೈ: ಮರಾಠ್ ವಾಡ ಪ್ರತ್ಯೇಕ ರಾಜ್ಯ ರಚನೆ ಕುರಿತು ಹೇಳಿಕೆ ನೀಡಿ ವಿವಾದ ಉಂಟು ಮಾಡಿದ್ದ ಮಹಾರಾಷ್ಟ್ರ ಅಡ್ವೊಕೇಟ್ ಜನರಲ್(ಎಜಿ) ಶ್ರೀಹರಿ ಅಣೆ ರಾಜೀನಾಮೆ ನೀಡಿದ್ದಾರೆ. 
ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಿದ ಶ್ರೀಹರಿ ಅಣೆ, ರಾಜೀನಾಮೆ ಪತ್ರವನ್ನು ನೀಡಿದ್ದಾರೆ. 2015 ರ ಅಕ್ಟೋಬರ್ ನಲ್ಲಿ ಸುನಿಲ್ ಮನೋಹರ್ ರಾಜೀನಾಮೆ ನೀಡಿದ್ದ ನಂತರ ಶ್ರೀಹರಿ ಅಣೆ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. ಶ್ರೀಹರಿ ಅಣೆ, ಈ ಹಿಂದೆಯೂ ವಿದರ್ಭ ಪ್ರತ್ಯೇಕ ರಾಜ್ಯ ಕುರಿತು ಜನಾಭಿಪ್ರಾಯ ಸಂಗ್ರಹಣೆಯಾಗಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದರು. 
ಅಡ್ವೊಕೇಟ್ ಜನರಲ್ ಪ್ರತ್ಯೇಕ ರಾಜ್ಯ ರಚನೆ ಕುರಿತು ಹೇಳಿಕೆ ನೀದಿದ್ದಕ್ಕೆ ಮಹಾರಾಷ್ಟ್ರದ ವಿಧಾನಸಭೆಯಲ್ಲೂ ಖಂಡನೆ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT