ವಿಜಯ್ ಮಲ್ಯ ಹಾಗೂ ಅರುಣ್ ಜೇಟ್ಲಿ 
ದೇಶ

ಮಲ್ಯರಿಂದ ಭಾರತೀಯ ಉದ್ಯಮಿಗಳಿಗೆ ಕೆಟ್ಟ ಹೆಸರು: ಅರುಣ್ ಜೇಟ್ಲಿ

ಮದ್ಯದ ದೊರೆ ವಿಜಯ್ ಮಲ್ಯ ಅವರು ಭಾರತದಲ್ಲಿನ ಖಾಸಗಿ ವಲಯದ ಉದ್ಯಮಿಗಳಿಗೂ ಕೆಟ್ಟ ಹೆಸರನ್ನು ತಂದಿದ್ದಾರೆಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ...

ಮುಂಬೈ: ಮದ್ಯದ ದೊರೆ ವಿಜಯ್ ಮಲ್ಯ ಅವರು ಭಾರತದಲ್ಲಿನ ಖಾಸಗಿ ವಲಯದ ಉದ್ಯಮಿಗಳಿಗೂ ಕೆಟ್ಟ ಹೆಸರನ್ನು ತಂದಿದ್ದಾರೆಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.

ಮುಂಬೈ ನಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಚರ್ಚೆಯೊಂದರಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಮಲ್ಯ ಅವರು ತಾವಷ್ಟೇ ಕೆಟ್ಟ ಹೆಸರನ್ನು ಪಡೆದುಕೊಂಡಿಲ್ಲ, ಭಾರತದಲ್ಲಿನ ಖಾಸಗಿ ವಲಯದ ಉದ್ಯಮಿಗಳಿಗೂ ಕೆಟ್ಟ ಹೆಸರನ್ನು ತಂದಿದ್ದಾರೆಂದು ಹೇಳಿದ್ದಾರೆ.

ಸಾಲ ತೀರಿಸುವುದನ್ನು ತಿರಸ್ಕರಿಸುತ್ತಿರುವ ಮಲ್ಯ ಅವರಿಂದ ಇಂದು ಬ್ಯಾಂಕುಗಳ ಮೇಲೆ ಪರಿಣಾಮ ಬೀರುತ್ತಿದೆ. ಬ್ಯಾಂಕುಗಳಿಂದ ಸಾಲ ತೆಗೆದುಕೊಂಡಿರುವ ಮತ್ತಷ್ಟು ಉದ್ಯಮಗಳು ಸಾಲ ಮರುಪಾವತಿ ಮಾಡುವುದನ್ನು ತಡ ಮಾಡುತ್ತಿದ್ದಾರೆ. ಮಲ್ಯ ಅವರು ಈ ರೀತಿಯಾಗಿ ಎಷ್ಟು ದಿನಗಳ ಕಾಲ ಜೀವನ ನಡೆಸಲು ಸಾಧ್ಯ.

ಮಲ್ಯ ಅವರ ಪ್ರಕರಣ ಸಾಮಾನ್ಯ ಪ್ರಕರಣಗಳಂತಲ್ಲ. ಈ ಪ್ರಕರಗಳು ಇಂದು ಉದ್ಯಮಗಳ ವಾತಾವರಣವನ್ನು ಹಾಳು ಮಾಡಿದೆ. ವ್ಯವಹಾರ ವೈಫಲ್ಯದಿಂದಾಗಿ ಇಂದು ಉದ್ಯಮ ವಲಯಗಳು, ವಿಮಾನಯಾನ ವಲಯಗಳು ಸಂಕಷ್ಟದಲ್ಲಿ ಕಾಲ ಕಳೆಯುವಂತಾಗಿದೆ. ಮಲ್ಯ ಜೊತೆಗೆ ಸ್ಪರ್ಧೆಗಿಳಿದಿದ್ದವರು ಹಾಗೂ ಅವರನ್ನು ಅನುಸರಿಸುತ್ತಿರುವವರು ಇಂದು ಸಂಕಷ್ಟದಲ್ಲಿದ್ದಾರೆ. ಮಲ್ಯ ಅವರು ಶೀಘ್ರದಲ್ಲಿ ಭಾರತಕ್ಕೆ ಬಂದು ಸಾಲವನ್ನು ಮರುಪಾವತಿ ಮಾಡಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT