ನರೇಂದ್ರ ಮೋದಿ 
ದೇಶ

ಸಾರ್ವಜನಿಕ ಕುಂದುಕೊರತೆ ಪರಿಹಾರಕ್ಕೆ 60 ದಿನಗಳ ಡೆಡ್ ಲೈನ್ ನೀಡಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ 60 ದಿನಗಳ ಗಡುವು ನೀಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ 60 ದಿನಗಳ ಗಡುವು ನೀಡಿದ್ದಾರೆ.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ದೂರುಗಳು ರಾಶಿ ರಾಶಿ ಬಿದ್ದಿದ್ದು, ಅವುಗಳನ್ನು ಆದಷ್ಟು ಇತ್ಯರ್ಥಪಡಿಸಲು ಪ್ರಧಾನಿ ಅಧಿಕಾರಿಗಳಿಗೆ ಡೆಡ್ ನೈಲ್ ನೀಡಿದ್ದಾರೆ. ಸಾಮಾನ್ಯ ರೀತಿಯ ದೂರುಗಳನ್ನು 30 ದಿನಗಳಲ್ಲಿ ಹಾಗೂ ವಿಶೇಷವಾದ ದೂರುಗಳನ್ನು 60 ದಿನಗಳ ಒಳಗೆ ಇತ್ಯರ್ಥಪಡಿಸಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಗತಿಪರ ಆಡಳಿತೆ ಮತ್ತು ಸಕಾಲಿಕ ಅನುಷ್ಠಾನಕ್ಕೆ ರೂಪಿಸಲಾಗಿರುವ ಮಲ್ಟಿ ಮೋಡಾಲ್‌ ವೇದಿಕೆಯಾಗಿರುವ ಐಸಿಟಿ ಆಧರಿತ "ಪ್ರಗತಿ' ಮೂಲಕ ಅಧಿಕಾರಿಗಳೊಂದಿಗೆ ನಡೆಸಲಾದ 11ನೇ ಸಂವಹನ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಆಧಾರ್‌ ನೊಂದಿಗೆ ಎಲ್ಲ ಭೂ ದಾಖಲೆಗಳನ್ನು ಏಕತ್ರಗೊಳಿಸಬೇಕು ಮತ್ತು ಪರಿಣಾಮಕಾರಿ ಆಡಳಿತಕ್ಕೆ ಅವಶ್ಯವಿರುವ ಮಾರ್ಗೋಪಾಯಗಳನ್ನು ಅನುಸರಿಸುವಂತೆ ಸೂಚಿಸಿದರು.
ಜನರ ದೂರುಗಳನ್ನು ನಿಭಾಯಿಸುವುದು, ವಿಲೇವಾರಿ ಮಾಡುವುದು ಮತ್ತು ಇತ್ಯರ್ಥ ಪಡಿಸುವುದು ಪ್ರಜಾಸತ್ತೆಯಲ್ಲಿ ಅತ್ಯಂತ ಮಹತ್ವದ ಕೆಲಸವಾಗಿದೆ. ಸರ್ಕಾರಿ ಅಧಿಕಾರಿಗಳು ಈ ನಿಟ್ಟಿನಲ್ಲಿ ತಮ್ಮ ಕಾರ್ಯ ಶೈಲಿಯನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ಕಾವೇರಿ ನೀರಿನ ವಿವಾದ: ಕರ್ನಾಟಕದಿಂದ 9,000 ಕ್ಯೂಸೆಕ್ ನೀರು ಬಿಡುಗಡೆಯಾದರೂ, ಕೊರತೆ ಇದೆ-ತಮಿಳುನಾಡು; ಸೆ.15 ಕ್ಕೆ ಮತ್ತೆ ವಿಚಾರಣೆ

ನೇಪಾಳದಲ್ಲಿ ಹಠಾತ್ ಪ್ರವಾಹ: ಕರ್ನಾಟಕದ 13 ಮಂದಿ ನಾಪತ್ತೆ; ಇನ್ನೂ ಸುಳಿವು ಸಿಕ್ಕಿಲ್ಲ ಎಂದ ಸಿಎಂ ಡಿಕೆ ಶಿವಕುಮಾರ್

7,200 ಮೀಟರ್‌ ಎತ್ತರದಿಂದ ಕುಸಿತ; ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮನದಿ ಕುಸಿತದ ಭೀಕರ ಕ್ಷಣ ಡ್ರೋನ್ ಕ್ಯಾಮೆರಾದಲ್ಲಿ ಸೆರೆ!

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!