ನರೇಂದ್ರ ಮೋದಿ 
ದೇಶ

ಸಾರ್ವಜನಿಕ ಕುಂದುಕೊರತೆ ಪರಿಹಾರಕ್ಕೆ 60 ದಿನಗಳ ಡೆಡ್ ಲೈನ್ ನೀಡಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ 60 ದಿನಗಳ ಗಡುವು ನೀಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ 60 ದಿನಗಳ ಗಡುವು ನೀಡಿದ್ದಾರೆ.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ದೂರುಗಳು ರಾಶಿ ರಾಶಿ ಬಿದ್ದಿದ್ದು, ಅವುಗಳನ್ನು ಆದಷ್ಟು ಇತ್ಯರ್ಥಪಡಿಸಲು ಪ್ರಧಾನಿ ಅಧಿಕಾರಿಗಳಿಗೆ ಡೆಡ್ ನೈಲ್ ನೀಡಿದ್ದಾರೆ. ಸಾಮಾನ್ಯ ರೀತಿಯ ದೂರುಗಳನ್ನು 30 ದಿನಗಳಲ್ಲಿ ಹಾಗೂ ವಿಶೇಷವಾದ ದೂರುಗಳನ್ನು 60 ದಿನಗಳ ಒಳಗೆ ಇತ್ಯರ್ಥಪಡಿಸಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಗತಿಪರ ಆಡಳಿತೆ ಮತ್ತು ಸಕಾಲಿಕ ಅನುಷ್ಠಾನಕ್ಕೆ ರೂಪಿಸಲಾಗಿರುವ ಮಲ್ಟಿ ಮೋಡಾಲ್‌ ವೇದಿಕೆಯಾಗಿರುವ ಐಸಿಟಿ ಆಧರಿತ "ಪ್ರಗತಿ' ಮೂಲಕ ಅಧಿಕಾರಿಗಳೊಂದಿಗೆ ನಡೆಸಲಾದ 11ನೇ ಸಂವಹನ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಆಧಾರ್‌ ನೊಂದಿಗೆ ಎಲ್ಲ ಭೂ ದಾಖಲೆಗಳನ್ನು ಏಕತ್ರಗೊಳಿಸಬೇಕು ಮತ್ತು ಪರಿಣಾಮಕಾರಿ ಆಡಳಿತಕ್ಕೆ ಅವಶ್ಯವಿರುವ ಮಾರ್ಗೋಪಾಯಗಳನ್ನು ಅನುಸರಿಸುವಂತೆ ಸೂಚಿಸಿದರು.
ಜನರ ದೂರುಗಳನ್ನು ನಿಭಾಯಿಸುವುದು, ವಿಲೇವಾರಿ ಮಾಡುವುದು ಮತ್ತು ಇತ್ಯರ್ಥ ಪಡಿಸುವುದು ಪ್ರಜಾಸತ್ತೆಯಲ್ಲಿ ಅತ್ಯಂತ ಮಹತ್ವದ ಕೆಲಸವಾಗಿದೆ. ಸರ್ಕಾರಿ ಅಧಿಕಾರಿಗಳು ಈ ನಿಟ್ಟಿನಲ್ಲಿ ತಮ್ಮ ಕಾರ್ಯ ಶೈಲಿಯನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT