ನರೇಂದ್ರ ಮೋದಿ 
ದೇಶ

ಸಾರ್ವಜನಿಕ ಕುಂದುಕೊರತೆ ಪರಿಹಾರಕ್ಕೆ 60 ದಿನಗಳ ಡೆಡ್ ಲೈನ್ ನೀಡಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ 60 ದಿನಗಳ ಗಡುವು ನೀಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ 60 ದಿನಗಳ ಗಡುವು ನೀಡಿದ್ದಾರೆ.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ದೂರುಗಳು ರಾಶಿ ರಾಶಿ ಬಿದ್ದಿದ್ದು, ಅವುಗಳನ್ನು ಆದಷ್ಟು ಇತ್ಯರ್ಥಪಡಿಸಲು ಪ್ರಧಾನಿ ಅಧಿಕಾರಿಗಳಿಗೆ ಡೆಡ್ ನೈಲ್ ನೀಡಿದ್ದಾರೆ. ಸಾಮಾನ್ಯ ರೀತಿಯ ದೂರುಗಳನ್ನು 30 ದಿನಗಳಲ್ಲಿ ಹಾಗೂ ವಿಶೇಷವಾದ ದೂರುಗಳನ್ನು 60 ದಿನಗಳ ಒಳಗೆ ಇತ್ಯರ್ಥಪಡಿಸಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಗತಿಪರ ಆಡಳಿತೆ ಮತ್ತು ಸಕಾಲಿಕ ಅನುಷ್ಠಾನಕ್ಕೆ ರೂಪಿಸಲಾಗಿರುವ ಮಲ್ಟಿ ಮೋಡಾಲ್‌ ವೇದಿಕೆಯಾಗಿರುವ ಐಸಿಟಿ ಆಧರಿತ "ಪ್ರಗತಿ' ಮೂಲಕ ಅಧಿಕಾರಿಗಳೊಂದಿಗೆ ನಡೆಸಲಾದ 11ನೇ ಸಂವಹನ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಆಧಾರ್‌ ನೊಂದಿಗೆ ಎಲ್ಲ ಭೂ ದಾಖಲೆಗಳನ್ನು ಏಕತ್ರಗೊಳಿಸಬೇಕು ಮತ್ತು ಪರಿಣಾಮಕಾರಿ ಆಡಳಿತಕ್ಕೆ ಅವಶ್ಯವಿರುವ ಮಾರ್ಗೋಪಾಯಗಳನ್ನು ಅನುಸರಿಸುವಂತೆ ಸೂಚಿಸಿದರು.
ಜನರ ದೂರುಗಳನ್ನು ನಿಭಾಯಿಸುವುದು, ವಿಲೇವಾರಿ ಮಾಡುವುದು ಮತ್ತು ಇತ್ಯರ್ಥ ಪಡಿಸುವುದು ಪ್ರಜಾಸತ್ತೆಯಲ್ಲಿ ಅತ್ಯಂತ ಮಹತ್ವದ ಕೆಲಸವಾಗಿದೆ. ಸರ್ಕಾರಿ ಅಧಿಕಾರಿಗಳು ಈ ನಿಟ್ಟಿನಲ್ಲಿ ತಮ್ಮ ಕಾರ್ಯ ಶೈಲಿಯನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT