ರಾಜಧಾನಿ ದೆಹಲಿ ಮೇಲೆ ಉಗ್ರರ ಕೆಂಗಣ್ಣು: ಹೆಚ್ಚಿದ ಭದ್ರತೆ 
ದೇಶ

ರಾಜಧಾನಿ ದೆಹಲಿ ಮೇಲೆ ಉಗ್ರರ ಕೆಂಗಣ್ಣು: ಹೆಚ್ಚಿದ ಭದ್ರತೆ

ಬ್ರುಸೆಲ್ಸ್ ಮೇಲೆ ನಡೆದ ಉಗ್ರರ ದಾಳಿ ಇಡೀ ವಿಶ್ವವನ್ನು ಬೆಚ್ಚಿಬೀಳಿಸಿತ್ತು. ಇದೀಗ ರಾಜಧಾನಿ ದೆಹಲಿ ಮೇಲೂ ಕೆಂಗಣ್ಣು ಬೀರಿರುವ ಉಗ್ರರು ಹೋಳಿ ಹಬ್ಬ ಆಚರಣೆಯಂದು ವಿಧ್ವಂಸಕ ಕೃತ್ಯವೆಸಗಲು...

ನವದೆಹಲಿ: ಬ್ರುಸೆಲ್ಸ್ ಮೇಲೆ ನಡೆದ ಉಗ್ರರ ದಾಳಿ ಇಡೀ ವಿಶ್ವವನ್ನು ಬೆಚ್ಚಿಬೀಳಿಸಿತ್ತು. ಇದೀಗ ರಾಜಧಾನಿ ದೆಹಲಿ ಮೇಲೂ ಕೆಂಗಣ್ಣು ಬೀರಿರುವ ಉಗ್ರರು ಹೋಳಿ ಹಬ್ಬ ಆಚರಣೆಯಂದು ವಿಧ್ವಂಸಕ ಕೃತ್ಯವೆಸಗಲು ಯೋಜನೆ ರೂಪಿಸಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವುದಾಗಿ ಗುರುವಾರ ತಿಳಿದುಬಂದಿದೆ.

ಭಾರತದಾದ್ಯಂತ ಇಂದು ಹೋಳಿಹಬ್ಬ ಆಚರಣೆ ಮಾಡುಲಾಗುತ್ತಿದ್ದು, ಈ ವೇಳೆ ಜನಿನಬಿಡ ಪ್ರದೇಶಗಳು, ಹೋಟೆಲ್, ಆಸ್ಪತ್ರೆಗಳನ್ನು ಗುರಿಯಾಗಿರಿಸಿಕೊಂಡಿರುವ ಉಗ್ರರು ಇದೀಗ ದೆಹಲಿ, ಪಂಜಾಬ್ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯವೆಸಗಲು ಯೋಜನೆ ರೂಪಿಸಿದ್ದಾರೆಂದು ಗುಪ್ತಚರ ಇಲಾಖೆ ಕೇಂದ್ರಕ್ಕೆ ಎಚ್ಚರಿಕೆ ನೀಡಿರುವುದಾಗಿ ತಿಳಿದುಬಂದಿದೆ.

ಗುಪ್ತಚರ ಇಲಾಖೆ ಮಾಹಿತಿಯನ್ವಯ ಈಗಾಗಲೇ ಕೇಂದ್ರ ಸರ್ಕಾರ ದೆಹಲಿ, ಪಂಜಾಬ್ ಹಾಗೂ ಅಸ್ಸಾಂ ರಾಜ್ಯ ಸರ್ಕಾರಗಳಿಗೆ ಭದ್ರತೆ ಹೆಚ್ಚಿಸುವಂತೆ ಸೂಚನೆ ನೀಡಿದ್ದು, ಸೂಚನೆಯನ್ವಯ ಇದೀಗ ಎಲ್ಲಾ ರಾಜ್ಯಗಳಲ್ಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಮಾಜಿ ಪಾಕಿಸ್ತಾನ ಯೋಧನೊಬ್ಬ ಕಳೆದ ವಾರ ಗಡಿಯನ್ನು ದಾಟಿ ಭಾರತಕ್ಕೆ ಬಂದಿದ್ದು, 6 ಉಗ್ರರೊಂದಿಗೆ ಪಂಜಾಬ್ ನಲ್ಲಿ ತಲೆಮರೆಸಿಕೊಂಡಿದ್ದಾರೆ. ಹೋಳಿ ಆಚರಣೆ ಹಿನ್ನೆಲೆಯಲ್ಲಿ ಈ ಉಗ್ರರು ದೆಹಲಿಯಲ್ಲಿ ವಿಧ್ವಂಸಕ ಕೃತ್ಯವೆಸಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು ಈಗಾಗಲೇ ದೆಹಲಿಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿದ್ದು, ಮುಂಜಾಗ್ರತಾ ಕ್ರಮವಾಗಿ 2,500 ಅರೆ ಸೇನಾಪಡೆಯನ್ನು ನಿಯೋಜಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT