ಸಾಂಕೇತಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಬಳಸಿ ತೃಣಮೂಲ ಕಾಂಗ್ರೆಸ್ ನಾಯಕನ ಕೊಲೆ

ಪಶ್ಚಿಮ ಬಂಗಾಳದ 24 ದಕ್ಷಿಣ ಪರಗಣ ಜಿಲ್ಲೆಯ ಕಾಕದ್ವೀಪ್‌ನಲ್ಲಿ ಕಳೆದ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್‌ನ...

ಕಾಕದ್ವೀಪ್‌ : ಪಶ್ಚಿಮ ಬಂಗಾಳದ 24 ದಕ್ಷಿಣ ಪರಗಣ ಜಿಲ್ಲೆಯ ಕಾಕದ್ವೀಪ್‌ನಲ್ಲಿ ಕಳೆದ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್‌ನ ನಾಯಕರೊಬ್ಬರ ಮೇಲೆ ಕಚ್ಚಾ ಬಾಂಬ್‌ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನವೇ ನಡೆದಿರುವ ಈ ಕಗ್ಗೊಲೆ ಈ ಪ್ರದೇಶದಲ್ಲಿ ತೀವ್ರ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿದೆ.

ಟಿಎಂಸಿ ನಾಯಕ ಹಾಜಿ ಅಬ್ದುಲ್‌ ಜಹೇಲ್‌ ಮುಲ್ಲಾ (75), ಸ್ಥಳೀಯ ಟಿಎಂಸಿ ಅಭ್ಯರ್ಥಿ ಮಂತುರಾಮ್‌ ಪಕೀರಾ ಅವರ ಪರ ಚುನಾವಣಾ ಪ್ರಚಾರಾಭಿಯಾನದ ಸಭೆ ಮುಗಿಸಿ ರಾತ್ರಿ 11.30ರ ಹೊತ್ತಿಗೆ ಮನೆಗೆ ವಾಪಾಸಾಗುತ್ತಿದ್ದರು. ಈ ವೇಳೆ ಅಬ್ದುಲ್‌ ಜಹೇಲ್‌ ಅವರನ್ನು ಅಪರಿಚಿತ ಹಂತಕರು ಕಚ್ಚಾ ಬಾಂಬ್ ಸಿಡಿಸಿ ಕೊಂದಿದ್ದಾರೆ. ದಾಳಿಯ ತೀವ್ರತೆಯಿಂದ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ.

ಈ ಕೃತ್ಯ ನಡೆಯುತ್ತಿದ್ದಂತೆಯೇ ಜನರು ಸ್ಥಳದಲ್ಲಿ ಜಮಾಯಿಸಿತೊಡಗಿದಾಗ ಹಂತಕರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಬೆದರಿಸುತ್ತಾ ತಮ್ಮ ವಾಹನದಲ್ಲಿ ಪರಾರಿಯಾಗಿದ್ದಾರೆ.

ಈ ಕೊಲೆ ಕೃತ್ಯದ ಹಿಂದೆ ಸಿಪಿಎಂ ಕಾರ್ಯಕರ್ತರ ಕೈವಾಡವಿರಬಹುದೆಂದು ಟಿಎಂಸಿ ಆರೋಪಿಸಿದೆ. ಆದರೆ ಪಕ್ಷದೊಳಗಿನ ಬಣಗಳ ಜಗಳದಿಂದಾಗಿ ಅಬ್ದುಲ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಸಿಪಿಎಂ ಹೇಳಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT