ಸಾಂಕೇತಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಬಳಸಿ ತೃಣಮೂಲ ಕಾಂಗ್ರೆಸ್ ನಾಯಕನ ಕೊಲೆ

ಪಶ್ಚಿಮ ಬಂಗಾಳದ 24 ದಕ್ಷಿಣ ಪರಗಣ ಜಿಲ್ಲೆಯ ಕಾಕದ್ವೀಪ್‌ನಲ್ಲಿ ಕಳೆದ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್‌ನ...

ಕಾಕದ್ವೀಪ್‌ : ಪಶ್ಚಿಮ ಬಂಗಾಳದ 24 ದಕ್ಷಿಣ ಪರಗಣ ಜಿಲ್ಲೆಯ ಕಾಕದ್ವೀಪ್‌ನಲ್ಲಿ ಕಳೆದ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್‌ನ ನಾಯಕರೊಬ್ಬರ ಮೇಲೆ ಕಚ್ಚಾ ಬಾಂಬ್‌ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನವೇ ನಡೆದಿರುವ ಈ ಕಗ್ಗೊಲೆ ಈ ಪ್ರದೇಶದಲ್ಲಿ ತೀವ್ರ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿದೆ.

ಟಿಎಂಸಿ ನಾಯಕ ಹಾಜಿ ಅಬ್ದುಲ್‌ ಜಹೇಲ್‌ ಮುಲ್ಲಾ (75), ಸ್ಥಳೀಯ ಟಿಎಂಸಿ ಅಭ್ಯರ್ಥಿ ಮಂತುರಾಮ್‌ ಪಕೀರಾ ಅವರ ಪರ ಚುನಾವಣಾ ಪ್ರಚಾರಾಭಿಯಾನದ ಸಭೆ ಮುಗಿಸಿ ರಾತ್ರಿ 11.30ರ ಹೊತ್ತಿಗೆ ಮನೆಗೆ ವಾಪಾಸಾಗುತ್ತಿದ್ದರು. ಈ ವೇಳೆ ಅಬ್ದುಲ್‌ ಜಹೇಲ್‌ ಅವರನ್ನು ಅಪರಿಚಿತ ಹಂತಕರು ಕಚ್ಚಾ ಬಾಂಬ್ ಸಿಡಿಸಿ ಕೊಂದಿದ್ದಾರೆ. ದಾಳಿಯ ತೀವ್ರತೆಯಿಂದ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ.

ಈ ಕೃತ್ಯ ನಡೆಯುತ್ತಿದ್ದಂತೆಯೇ ಜನರು ಸ್ಥಳದಲ್ಲಿ ಜಮಾಯಿಸಿತೊಡಗಿದಾಗ ಹಂತಕರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಬೆದರಿಸುತ್ತಾ ತಮ್ಮ ವಾಹನದಲ್ಲಿ ಪರಾರಿಯಾಗಿದ್ದಾರೆ.

ಈ ಕೊಲೆ ಕೃತ್ಯದ ಹಿಂದೆ ಸಿಪಿಎಂ ಕಾರ್ಯಕರ್ತರ ಕೈವಾಡವಿರಬಹುದೆಂದು ಟಿಎಂಸಿ ಆರೋಪಿಸಿದೆ. ಆದರೆ ಪಕ್ಷದೊಳಗಿನ ಬಣಗಳ ಜಗಳದಿಂದಾಗಿ ಅಬ್ದುಲ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಸಿಪಿಎಂ ಹೇಳಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT