ಗೌರವ್ ಭಾಟಿಯಾ 
ದೇಶ

ಉತ್ತರಪ್ರದೇಶ: ಹೆಚ್ಚುವರಿ ಅಡ್ವೋಕೇಟ್ ಜನರಲ್ ಭಾಟಿಯಾ ವಜಾ

ಸರ್ಕಾರವನ್ನು ಸರಿಯಾಗಿ ಸಮರ್ಥಿಸಿಕೊಳ್ಳಲಿಲ್ಲ ಎಂಬ ಕಾರಣಕ್ಕಾಗಿ ಅಡಿಷನಲ್ ಅಡ್ವೋಕೇಟ್ ಜನರಲ್ ಗೌರವ್ ಭಾಟಿಯಾ ಸೇರಿದಂತೆ ಇಬ್ಬರು ಉನ್ನತ ಕಾನೂನು...

ಲಖನೌ: ಸರ್ಕಾರವನ್ನು ಸರಿಯಾಗಿ ಸಮರ್ಥಿಸಿಕೊಳ್ಳಲಿಲ್ಲ ಎಂಬ ಕಾರಣಕ್ಕಾಗಿ ಅಡಿಷನಲ್ ಅಡ್ವೋಕೇಟ್ ಜನರಲ್ ಗೌರವ್ ಭಾಟಿಯಾ ಸೇರಿದಂತೆ ಇಬ್ಬರು ಉನ್ನತ ಕಾನೂನು ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರವು ವಜಾ ಮಾಡಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ದಿವಂಗತ ವೀರೇಂದ್ರ ಭಾಟಿಯಾ ಅವರ ಪುತ್ರ ಗೌರವ್ ಭಾಟಿಯಾ ಮತ್ತು ರೀನಾ ಸಿಂಗ್ ಅವರನ್ನು ಹುದ್ದೆಗಳಿಂದ ಕಿತ್ತು ಹಾಕಲಾಗಿದೆ ಎಂದು ವಿಶೇಷ ಕಾರ್ಯದರ್ಶಿ(ಕಾನೂನು) ಅಮರ್ ಜೀತ್ ತ್ರಿಪಾಠಿ ಅವರು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಸರ್ಕಾರ ನನ್ನನ್ನು ವಜಾ ಮಾಡಿಲ್ಲ, ನಾನೇ ರಾಜಿನಾಮೆ ನೀಡಿರುವೆ
ಇನ್ನು ಗೌರವ್ ಭಾಟಿಯಾ ಅವರು ಮಾತ್ರ ತಾವು ಅಡಿಷನಲ್ ಅಡ್ವೋಕೇಟ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಫೇಸ್​ಬುಕ್ ಪೋಸ್ಟಿನಲ್ಲಿ ತಿಳಿಸಿದ್ದು ಸಹಕರಿಸಿದ ಎಲ್ಲರಿಗೂ ವಂದನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತಂತೆ ಸಮಾಜವಾದಿ ಪಕ್ಷದ ಕಾಲೆಳೆದಿರುವ ಬಿಜೆಪಿ ರಾಜ್ಯ ವಕ್ತಾರ ವಿಜಯ್ ಬಹಾದುರ್ ಪಾಠಕ್ ಅವರು, ಬೆಳವಣಿಗೆಯನ್ನು ಜಿಜ್ಞಾಸೆಗೆ ಯೋಗ್ಯವಾದ ಬೆಳವಣಿಗೆ ಎಂದು ಬಣ್ಣಿಸಿದ್ದು,  ಇದು ವಜಾವೋ ಅಥವಾ ರಾಜೀನಾಮೆಯೋ ಎಂಬುದರ ಬಗ್ಗೆ ಗೊಂದಲ ಹುಟ್ಟಿರುವುದರ ಹೊರತಾಗಿ ಸಮಾಜವಾದಿ ಪಕ್ಷಕ್ಕೆ ಜನರ ಬಗ್ಗೆ ಎಂತಹ ಅನಾದರ ಇದೆ ಎಂಬುದು ಜಗಜ್ಜಾಹೀರಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT