ಪಠಾಣ್ ಕೋಟ್ ದಾಳಿ ಪ್ರಕರಣ: ಪಾಕ್ ತನಿಖಾ ತಂಡಕ್ಕೆ ಭಾರತ ಸರ್ಕಾರದಿಂದ ವೀಸಾ 
ದೇಶ

ಪಠಾಣ್ ಕೋಟ್ ದಾಳಿ ಪ್ರಕರಣ: ಪಾಕ್ ತನಿಖಾ ತಂಡಕ್ಕೆ ಭಾರತ ಸರ್ಕಾರದಿಂದ ವೀಸಾ

ಪಠಾಣ್ ಕೋಟ್ ವಾಯು ದಾಳಿ ಪ್ರಕರಣದ ತನಿಖೆ ನಡೆಸಲು ಭಾರತಕ್ಕೆ ಆಗಮಿಸುತ್ತಿರುವ ಪಾಕ್ ತನಿಖಾ ತಂಡಕ್ಕೆ ಭಾರತ ಸರ್ಕಾರ ವೀಸಾ ನೀಡಿದೆ.

ನವದೆಹಲಿ: ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸಲು ಭಾರತಕ್ಕೆ ಆಗಮಿಸುತ್ತಿರುವ ಪಾಕ್ ತನಿಖಾ ತಂಡಕ್ಕೆ ಭಾರತ ಸರ್ಕಾರ ವೀಸಾ ನೀಡಿದೆ.

ಮಾ.27 ರಂದು ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಆಗಮಿಸಲಿದ್ದು 28 ರಂದು ಪಠಾಣ್ ಕೋಟ್ ವಾಯು ನೆಲೆಯಲ್ಲಿ ತನಿಖೆ ನಡೆಸಲಿದೆ. ನೇಪಾಳದಲ್ಲಿ ನಡೆದ ಸಾರ್ಕ್ ಸಭೆಯಲ್ಲಿ ಪಾಕಿಸ್ತಾನ ವಿದೇಶಾಂಗ ಇಲಾಖೆ ಸಲಹೆಗಾರ ಸರ್ತಾಜ್ ಅಜೀಜ್ - ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್  ಭೇಟಿ ನಂತರ ಪಾಕ್ ತನಿಖಾ ತಂಡಕ್ಕೆ ವೀಸಾ ನೀಡಲಾಗಿದೆ.
 
ಜ.2 ರಂದು ಪಂಜಾಬ್ ನ ಪಠಾಣ್ ಕೋಟ್ ವಾಯು ನೆಲೆಯಲ್ಲಿ  ದಾಳಿ ನಡೆಸಿದ್ದ ಭಯೋತ್ಪಾದಕರಿಗೂ ಪಾಕಿಸ್ತಾನದ ಜೈಶ್-ಇ- ಮೊಹಮ್ಮದ್ ಉಗ್ರ ಸಂಘಟನೆಗೂ ನಂಟಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ರಚನೆ ಮಾಡಿರುವ ಜಂಟಿ ತನಿಖಾ ತಂಡ ಭಾರತಕ್ಕೆ ಆಗಮಿಸಿ ತನಿಖೆ ನಡೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT