ಪಠಾಣ್ ಕೋಟ್ ದಾಳಿ ಪ್ರಕರಣ: ಪಾಕ್ ತನಿಖಾ ತಂಡಕ್ಕೆ ಭಾರತ ಸರ್ಕಾರದಿಂದ ವೀಸಾ 
ದೇಶ

ಪಠಾಣ್ ಕೋಟ್ ದಾಳಿ ಪ್ರಕರಣ: ಪಾಕ್ ತನಿಖಾ ತಂಡಕ್ಕೆ ಭಾರತ ಸರ್ಕಾರದಿಂದ ವೀಸಾ

ಪಠಾಣ್ ಕೋಟ್ ವಾಯು ದಾಳಿ ಪ್ರಕರಣದ ತನಿಖೆ ನಡೆಸಲು ಭಾರತಕ್ಕೆ ಆಗಮಿಸುತ್ತಿರುವ ಪಾಕ್ ತನಿಖಾ ತಂಡಕ್ಕೆ ಭಾರತ ಸರ್ಕಾರ ವೀಸಾ ನೀಡಿದೆ.

ನವದೆಹಲಿ: ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸಲು ಭಾರತಕ್ಕೆ ಆಗಮಿಸುತ್ತಿರುವ ಪಾಕ್ ತನಿಖಾ ತಂಡಕ್ಕೆ ಭಾರತ ಸರ್ಕಾರ ವೀಸಾ ನೀಡಿದೆ.

ಮಾ.27 ರಂದು ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಆಗಮಿಸಲಿದ್ದು 28 ರಂದು ಪಠಾಣ್ ಕೋಟ್ ವಾಯು ನೆಲೆಯಲ್ಲಿ ತನಿಖೆ ನಡೆಸಲಿದೆ. ನೇಪಾಳದಲ್ಲಿ ನಡೆದ ಸಾರ್ಕ್ ಸಭೆಯಲ್ಲಿ ಪಾಕಿಸ್ತಾನ ವಿದೇಶಾಂಗ ಇಲಾಖೆ ಸಲಹೆಗಾರ ಸರ್ತಾಜ್ ಅಜೀಜ್ - ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್  ಭೇಟಿ ನಂತರ ಪಾಕ್ ತನಿಖಾ ತಂಡಕ್ಕೆ ವೀಸಾ ನೀಡಲಾಗಿದೆ.
 
ಜ.2 ರಂದು ಪಂಜಾಬ್ ನ ಪಠಾಣ್ ಕೋಟ್ ವಾಯು ನೆಲೆಯಲ್ಲಿ  ದಾಳಿ ನಡೆಸಿದ್ದ ಭಯೋತ್ಪಾದಕರಿಗೂ ಪಾಕಿಸ್ತಾನದ ಜೈಶ್-ಇ- ಮೊಹಮ್ಮದ್ ಉಗ್ರ ಸಂಘಟನೆಗೂ ನಂಟಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ರಚನೆ ಮಾಡಿರುವ ಜಂಟಿ ತನಿಖಾ ತಂಡ ಭಾರತಕ್ಕೆ ಆಗಮಿಸಿ ತನಿಖೆ ನಡೆಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT