ಸ್ವಜನಪಕ್ಷಪಾತ ಆರೋಪ: ದಿಗ್ವಿಜಯ್ ಸಿಂಗ್ ವಿರುದ್ಧ ಕಿಡಿಕಾರಿದ ಫಡ್ನವೀಸ್ ಪತ್ನಿ 
ದೇಶ

ಸ್ವಜನಪಕ್ಷಪಾತ ಆರೋಪ: ದಿಗ್ವಿಜಯ್ ಸಿಂಗ್ ವಿರುದ್ಧ ಕಿಡಿಕಾರಿದ ಫಡ್ನವೀಸ್ ಪತ್ನಿ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ಸ್ವಜನಪಕ್ಷಪಾತ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ದಿಗ್ವಿಜಯ್ ವಿರುದ್ಧ ಅಮೃತ ಫಡ್ನವೀಸ್ ಅವರು ಶನಿವಾರ ಕಿಡಿಕಾರಿದ್ದಾರೆ...

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ಸ್ವಜನಪಕ್ಷಪಾತ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ದಿಗ್ವಿಜಯ್ ವಿರುದ್ಧ ಅಮೃತ ಫಡ್ನವೀಸ್ ಅವರು ಶನಿವಾರ ಕಿಡಿಕಾರಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ದಿಗ್ವಿಜಯ್ ಸಿಂಗ್ ಅವರು ಇದೀಗ ತಮ್ಮ ರಾಜಕೀಯ ಗುರಿಗೆ ಮಹಿಳೆಯರ ಹೆಗಲನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನಂತಹ ಉದ್ಯೋಗಸ್ಥ ಮಹಿಳೆಯರಿಗೆ ಇದೊಂದು ಅವಮಾನ ಮಾಡಿದಂತೆ. ಬ್ಯಾಂಕಿನಲ್ಲಿ ಕೆಳಸ್ತರದಲ್ಲಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಇದರಲ್ಲಿ ನನ್ನದೇನು ಪಾತ್ರವಿರುವುದಿಲ್ಲ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ದಿಗ್ವಿಜಯ್ ಸಿಂಗ್ ಅವರು ಟ್ವೀಟ್ ಒಂದನ್ನು ಮಾಡಿ ಫಢ್ನವೀಸ್ ವಿರುದ್ಧ ಆರೋಪವನ್ನುಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವೀಸ್ ನೇತೃತ್ವದ ಎಸ್ಆರ್ ಎ (ಕೊಳಚೆ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ) ಡೆವಲಪರ್ಸ್ ಖಾತೆಗಳನ್ನು ವರ್ಲಿಯಲ್ಲಿರುವ ಆ್ಯಕ್ಸಿಸ್ ಬ್ಯಾಂಕ್ ನಲ್ಲೇ ತೆರೆಯುವಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕಾರಣವೇನು ಗೊತ್ತಾ? ಫಡ್ನವೀಸ್ ಪತ್ನಿ ಅಮೃತ ಫಡ್ನವೀಸ್ ಅವರು ಆ್ಯಕ್ಸಿಸ್ ಬ್ಯಾಂಕ್ ನ ಉಪಾಧ್ಯಕ್ಷರಾಗಿರುವುದು. ಇದಕ್ಕಿಂತ ಸ್ವಜನಪಕ್ಷಪಾತ ಧೋರಣೆ ಮತ್ತೊಂದಿದೆಯಾ ಎಂದು ಹೇಳಿದ್ದರು.

ದಿಗ್ವಿಜಯ್ ಸಿಂಗ್ ಅವರ ಈ ಹೇಳಿಕೆ ಕಿಡಿಕಾರಿದ್ದ ಫಡ್ನವೀಸ್ ಅವರು ಕ್ಷಮೆಯಾಚಿಸುವಂತೆ ಕಾನೂನಾತ್ಮಕವಾಗಿ ನೋಟಿಸ್ ವೊಂದನ್ನು ಜಾರಿ ಮಾಡಿದ್ದರು. ಕ್ಷಮೆಯಾಚಿಸದಿದ್ದ ಪಕ್ಷದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಸೂಚಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT