ಸುಷ್ಮಾ ಸ್ವರಾಜ್ 
ದೇಶ

ಬೆಂಗಳೂರಿನ ಫಾದರ್ ಟಾಮ್ ಪತ್ತೆಗೆ ಎಲ್ಲಾ ರೀತಿಯ ಪ್ರಯತ್ನ: ಸುಷ್ಮಾ

ಬೆಂಗಳೂರಿನ ಫಾದರ್ ಟಾಮ್ ಉಳುನ್ನಲಿಲ್ ಅವರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ವಿದೇಶಾಂಗ ಸಚಿವೆ

ನವದೆಹಲಿ: ಬೆಂಗಳೂರಿನ ಫಾದರ್ ಟಾಮ್ ಉಳುನ್ನಲಿಲ್ ಅವರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.

ಟಾಮ್ ಅವರನ್ನು ಅಪಹರಿಸಿದವರು ಎಲ್ಲಿ ಇರಿಸಿಕೊಂಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಪಹೃತರಿಂದ ಅವರನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ ಸರ್ಕಾರ ಎಲ್ಲಾ ರೀತಿಯಿಂದಲೂ ಪ್ರಯತ್ನಿಸುತ್ತಿದೆ. ಈಗಾಗಲೇ ಘಟನೆಯ ವಿವರಗಳನ್ನೆಲ್ಲ ಪಡೆಯಲಾಗಿದೆ. ತಜ್ಞರ ಜತೆ ಮಾತುಕತೆ ನಡೆಸಿ ಅವರನ್ನು ಹುಡುಕುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ದಶಕಗಳ ಕಾಲ ಪಾದ್ರಿಯಾಗಿ ಕಾರ್ಯನಿರ್ವಹಿಸಿದ್ದ ಟಾಮ್ ಅವರು ಮಾರ್ಚ್ 4ರಂದು ಯೆಮನ್​ನಿಂದ ಅಪಹರಣಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ನಾಲ್ವರು ಬಂದೂಕುಧಾರಿಗಳು ಅಪಹರಿಸಿದ್ದು, ಇವರು ಆಸಿಸ್ ಉಗ್ರರು ಎನ್ನುವ ಅನುಮಾನ ಬಲವಾಗಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಕಟ್ಟೆಚ್ಚರದಲ್ಲಿ ಹುಡುಕಾಟ ನಡೆದಿದೆ.

ಟಾಮ್ ಅವರು ಯೆಮನ್​ನ ಮದರ್ ತೆರೆಸಾ ಮಿಷನರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಾರ್ಚ್ 4ರಂದು ಈ ವ್ರದ್ಧಾಶ್ರಮದ ಮೇಲೆ ದಾಳಿ ನಡೆದ ಸಂದರ್ಭದಲ್ಲಿ 16 ಮಂದಿಯನ್ನು ಹತ್ಯೆಗೈಯ್ಯಲಾಗಿತ್ತು. ಅದೇ ವೇಳೆ ಟಾಮ್ ಅವರನ್ನು ಅಪಹರಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT