ಸಾಂದರ್ಭಿಕ ಚಿತ್ರ 
ದೇಶ

ಪಠಾಣ್ ಕೋಟ್ ದಾಳಿ: ಸೋಮವಾರ ದೆಹಲಿಗೆ ಆಗಮಿಸಲಿದೆ ಪಾಕ್ ತನಿಖಾ ತಂಡ

ಕಳೆದ ಜನವರಿಯಲ್ಲಿ ನಡೆದ ಪಠಾಣ್ ಕೋಟ್ ದಾಳಿ ಪ್ರಕರಣದ ತನಿಖೆಗಾಗಿ ಪಾಕಿಸ್ತಾನದ ಭದ್ರತಾ ಅಧಿಕಾರಿಗಳ ತಂಡ ಸೋಮವಾರ ದೆಹಲಿಗೆ ಆಗಮಿಸಿಲಿದೆ.

ನವದೆಹಲಿ: ಕಳೆದ ಜನವರಿಯಲ್ಲಿ ನಡೆದ ಪಠಾಣ್ ಕೋಟ್ ದಾಳಿ ಪ್ರಕರಣದ ತನಿಖೆಗಾಗಿ ಪಾಕಿಸ್ತಾನದ ಭದ್ರತಾ ಅಧಿಕಾರಿಗಳ ತಂಡ ಸೋಮವಾರ ದೆಹಲಿಗೆ ಆಗಮಿಸಿಲಿದೆ.
ಐವರು ಸದಸ್ಯರ ಪಾಕ್ ತನಿಖಾ ತಂಡ ಸೋಮವಾರ ಬೆಳಗ್ಗೆ ರಾಷ್ಟ್ರೀಯ ಭದ್ರತಾ ಸಂಸ್ಥೆ(ಎನ್ಐಎ)ಯ ಪ್ರಧಾನ ಕಚೇರಿಗೆ ಭೇಟಿ ನೀಡಿಲಿದ್ದು, ಮಂಗಳವಾರ ಪಠಾಣ್ ಕೋಟ್ ಗೆ ತೆರಳಲಿದೆ ಎಂದು ಎಎನ್ಐ ವರದಿ ಮಾಡಿದೆ.
ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸಲು ಭಾರತಕ್ಕೆ ಆಗಮಿಸುತ್ತಿರುವ ಪಾಕ್ ತನಿಖಾ ತಂಡಕ್ಕೆ ಭಾರತ ಸರ್ಕಾರ ಇತ್ತೀಚಿಗಷ್ಟೆ ವೀಸಾ ನೀಡಿತ್ತು.
ಜ.2 ರಂದು ಪಂಜಾಬ್ ನ ಪಠಾಣ್ ಕೋಟ್ ವಾಯು ನೆಲೆಯಲ್ಲಿ  ದಾಳಿ ನಡೆಸಿದ್ದ ಭಯೋತ್ಪಾದಕರಿಗೂ ಪಾಕಿಸ್ತಾನದ ಜೈಶ್-ಇ- ಮೊಹಮ್ಮದ್ ಉಗ್ರ ಸಂಘಟನೆಗೂ ನಂಟಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ರಚನೆ ಮಾಡಿರುವ ಜಂಟಿ ತನಿಖಾ ತಂಡ ಭಾರತಕ್ಕೆ ಆಗಮಿಸಿ ತನಿಖೆ ನಡೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT