ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲ 
ದೇಶ

ಪಿಡಿಪಿ- ಬಿಜೆಪಿ ಮೈತ್ರಿ ಅಫ್ಜಲ್ ಗುರು ಬಗ್ಗೆ ನಿಲುವು ಸ್ಪಷ್ಟಡಿಸಲಿ; ಕಾಂಗ್ರೆಸ್

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಸರ್ಕಾರ ರಚನೆ ಖಾತ್ರಿಯಾಗುತ್ತಿದ್ದಂತೆಯೇ ಬಿಜೆಪಿ-ಪಿಡಿಪಿ ಮೈತ್ರಿ ಅಫ್ಜಲ್ ಗುರು ವಿಷಯದಲ್ಲಿ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಸರ್ಕಾರ ರಚನೆ ಖಾತ್ರಿಯಾಗುತ್ತಿದ್ದಂತೆಯೇ  ಬಿಜೆಪಿ-ಪಿಡಿಪಿ ಮೈತ್ರಿ ಅಫ್ಜಲ್ ಗುರು ವಿಷಯದಲ್ಲಿ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ಸಂಸತ್ ಮೇಲೆ ದಾಳಿ ನಡೆಸಿದ ಉಗ್ರ ಅಫ್ಜಲ್ ಗುರುಗೆ ಗಲ್ಲು ಶಿಕ್ಷೆ ವಿಧಿಸಿದ್ದನ್ನು ಪಿಡಿಪಿ ಪಕ್ಷ ಖಂಡಿಸಿತ್ತು. ಆದರೆ ಬಿಜೆಪಿ ಈಗ ಪಿಡಿಪಿಯೊಂದಿಗೆ ಮೈತ್ರಿಗೆ ಮುಂದಾಗಿರುವುದರಿಂದ ಅಫ್ಜಲ್ ಗುರು ವಿಷಯದಲ್ಲಿ ಬಿಜೆಪಿ ಹಾಗೂ ಪಿಡಿಪಿ ಎರಡೂ ಪಕ್ಷಗಳು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಅಫ್ಜಲ್ ಗುರು ಗಲ್ಲು ಶಿಕ್ಷೆಯನ್ನು ವಿರೋಧಿಸಿದ್ದ ಪಿಡಿಪಿಯೊಂದಿಗೆ ಈಗ ಬಿಜೆಪಿ ಮೈತ್ರಿಗೆ ಮುಂದಾಗಿದೆ, ಹಾಗಾದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಈಗ ಯಾರನ್ನು ದೇಶದ್ರೋಹಿ ಎಂದು ಬ್ರಾಂಡ್ ಮಾಡುತ್ತಾರೆ ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.
ಜೆಎನ್ ಯು ವಿವಿಯಲ್ಲಿ ದೇಶವಿರೋಧಿ ಘೋಷಣೆ ಕೇಳಿಬಂದಿದ್ದ ಪ್ರಕರಣದಲ್ಲಿ ವಿದ್ಯಾರ್ಥಿ ಸಂಘದ ನಾಯಕ ಕನ್ಹಯ್ಯ ಕುಮಾರ್ ನನ್ನು ಬಂಧಿಸಲಾಗಿತ್ತು, ಕನ್ಹಯ್ಯ ಕುಮಾರ್ ನನ್ನು ಬಂಧಿಸಿದ್ದನ್ನು ವಿರೋಧಿಸಿದ್ದ ಕಾಂಗ್ರೆಸ್, ಬಿಜೆಪಿ ದೇಶದ್ರೋಹದ ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

SCROLL FOR NEXT