ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ 
ದೇಶ

ಹಣ, ತೋಳ್ಬಲದ ಮೂಲಕ ಬಿಜೆಪಿ, ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ: ಹರೀಶ್ ರಾವತ್

ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್...

ಡೆಹ್ರಾಡೂನ್, ನವದೆಹಲಿ: ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್, ರಾಷ್ಟ್ರಪತಿ ಆಡಳಿತ ಹೇರಿಕೆಗೆ ಒಂದು ವಿಧಾನ, ನಿಯಮವೆಂಬುದಿದೆ. ಬಿಜೆಪಿಗೆ ತಕ್ಕ ಉತ್ತರ ನೀಡಲು ನಾವು ಜನರ ಬಳಿಗೆ ಹೋಗಲು ಸಿದ್ಧವಿದ್ದೇವೆ ಎಂದು ಅವರು ಹೇಳಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಹಣಬಲ, ತೋಳ್ಬಲಗಳಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿದ್ದಾರೆ. ರಾಜ್ಯಪಾಲರನ್ನು ವಜಾಗೊಳಿಸಿ ಎಂದು ಮಾಜಿ ಮುಖ್ಯಮಂತ್ರಿಗಳೊಬ್ಬರು ನಿನ್ನೆ ಕೇಳಿದ ರೀತಿ ಖಂಡನೀಯವಾದದ್ದು. ಬಲಪಂಥೀಯ ಜನರು ಪ್ರಜಾಪ್ರಭುತ್ವವನ್ನು ಕೊಲ್ಲುವ ಬಿಜೆಪಿಯ ಪ್ರಯತ್ನವನ್ನು ಖಂಡಿಸಬೇಕು ಎಂದು ಹೇಳಿದರು.

ಕಳೆದ ರಾತ್ರಿ ಬಂದ ವರದಿ ಪ್ರಕಾರ ವಿಧಾನಸಭಾಧ್ಯಕ್ಷರು ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸಿದ ನಂತರ 9 ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದಾರೆ.  ಈ ಶಾಸಕರನ್ನು ಅನರ್ಹಗೊಳಿಸಿದರೆ ವಿಧಾನಸಭೆಯ ಸದಸ್ಯ ಬಲ 70ರಿಂದ 61ಕ್ಕೆ ಇಳಿಯುತ್ತದೆ. ಆಡಳಿತಾರೂಢ ಕಾಂಗ್ರೆಸ್ 27 ಶಾಸಕರನ್ನು ಹೊಂದಿರುತ್ತದೆ. ಅಲ್ಲದೆ ಪಿಡಿಪಿಯಿಂದ 6 ಶಾಸಕರಿರುತ್ತಾರೆ. ಒಟ್ಟು 33 ಶಾಸಕರಾಗುತ್ತಾರೆ. ನಾಳೆ ವಿಧಾನಸಭೆಯಲ್ಲಿ ಕಾಂಗ್ರೆಸ್ ವಿಶ್ವಾಸಮತ ಸಾಬೀತುಪಡಿಸಬೇಕು. ಬಿಜೆಪಿಯಲ್ಲಿ 28 ಶಾಸಕರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?