ಏಪ್ರಿಲ್ ನಿಂದ ಫೋನ್ ಕರೆ ಮೂಲಕ ರೈಲು ಟಿಕೆಟ್ ರದ್ದುಗೊಳಿಸುವ ವ್ಯವಸ್ಥೆ ಜಾರಿಗೆ 
ದೇಶ

ಏಪ್ರಿಲ್ ನಿಂದ ಫೋನ್ ಕರೆ ಮೂಲಕ ರೈಲು ಟಿಕೆಟ್ ರದ್ದುಗೊಳಿಸುವ ವ್ಯವಸ್ಥೆ ಜಾರಿಗೆ

ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ರೈಲ್ವೆ ಇಲಾಖೆ, ಈಗಾಗಲೇ ಕಾಯ್ದಿರಿಸಲಾಗಿರುವ ರೈಲ್ವೆ ಟಿಕೆಟ್ ನ್ನು ದೂರವಾಣಿ ಕರೆ ಮೂಲಕ ರದ್ದುಗೊಳಿಸುವ ವ್ಯವಸ್ಥೆಯನ್ನು ಏಪ್ರಿಲ್ ನಿಂದ ಜಾರಿಗೆ ತರಲಿದೆ.

ನವದೆಹಲಿ: ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ರೈಲ್ವೆ ಇಲಾಖೆ,  ಈಗಾಗಲೇ ಕಾಯ್ದಿರಿಸಲಾಗಿರುವ ರೈಲು ಟಿಕೆಟ್ ನ್ನು ದೂರವಾಣಿ ಕರೆ ಮೂಲಕ ರದ್ದುಗೊಳಿಸುವ ವ್ಯವಸ್ಥೆಯನ್ನು ಏಪ್ರಿಲ್ ನಿಂದ ಜಾರಿಗೆ ತರಲಿದೆ. 
ಟಿಕೆಟ್ ಕೌಂಟರ್ ಗಳಿಗೆ ತೆರಳಿ ಕಾಯ್ದಿರಿಸಲಾಗಿರುವ ಟಿಕೆಟ್ ಗಳನ್ನು ರದ್ದುಗೊಳಿಸುವುದಕ್ಕೆ ಸಮಸ್ಯೆ ಎದುರಿಸುವ ಪ್ರಯಾಣಿಕರಿಗೆ ಈ ವ್ಯವಸ್ಥೆ ಉಪಯುಕ್ತವಾಗಲಿದೆ. ಇದಕ್ಕಾಗಿ  ಟಿಕೆಟ್ ಕಾಯ್ದಿರಿಸಿರುವ ಪ್ರಯಾಣಿಕರು ಮಾಡಬೇಕಿರುವುದು ಇಷ್ಟೇ. 139 ಕರೆ ಮಾಡಿ ಕಾಯ್ದಿರಿಸಲಾಗಿರುವ ಟಿಕೆಟ್ ನ ವಿವರಗಳನ್ನು ನೀಡಬೇಕು, ನಂತರ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ದೂರವಾಣಿಗೆ(ಮೊಬೈಲ್ ಗೆ) ಒನ್ ಟೈಮ್ ಪಾಸ್ವರ್ಡ್ ಕಲಿಸಲಾಗುತ್ತದೆ. ಕರೆ ಮಾಡಿದ ದಿನದಂದೇ ಟಿಕೆಟ್ ಕೌಂಟರ್ ಗೆ ಹೋಗಿ ಪಾಸ್ವರ್ಡ್ ನ್ನು ಹೇಳಿದರೆ ಹಣ ವಾಪಸ್ ಪಡೆಯಬಹುದಾಗಿದೆ ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಿಕೆಟ್ ಹಣವನ್ನು ವಾಪಸ್ ಪಡೆಯಬೇಕಾದರೆ ಪ್ರಯಾಣಿಕರು ಹಲವು ಸಮಸ್ಯೆ ಎದುರಿಸುತ್ತಿದ್ದು, ಟಿಕೆಟ್ ಹಣವನ್ನು ನಿಗದಿತ ಸಮಯದಲ್ಲಿ ವಾಪಸ್ ಪಡೆಯುವ ವ್ಯವಸ್ಥೆ ಕಠಿಣವಾಗಿದೆ. ಹೊಸ ನಿಯಮಗಳ ಪ್ರಕಾರ ಟಿಕೆಟ್ ರದ್ದುಗೊಳಿಸುವ ನೈಜ ಪ್ರಯಾಣಿಕರಿಗೆ ಸಹಾಯವಾಗಲೆಂದು ಶುಲ್ಕವನ್ನು ದುಪ್ಪಟ್ಟುಗೊಳಿಸಲಾಗಿದೆ. ಪ್ರಯಾಣಿಕರು ಟಿಕೆಟ್ ಹಣ ವಾಪಸ್ ಪಡೆಯುವುದು ಮತ್ತಷ್ಟು ಸುಲಭವಾಗಿಸಲು ಏಪ್ರಿಲ್ ನಿಂದ ಫೋನ್ ಕರೆ ಮೂಲಕ ರೈಲ್ವೆ ಟಿಕೆಟ್ ರದ್ದುಗೊಳಿಸುವ ವ್ಯವಸ್ಥೆ ಜಾರಿಗೆ ಬರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT