ಏಪ್ರಿಲ್ ನಿಂದ ಫೋನ್ ಕರೆ ಮೂಲಕ ರೈಲು ಟಿಕೆಟ್ ರದ್ದುಗೊಳಿಸುವ ವ್ಯವಸ್ಥೆ ಜಾರಿಗೆ 
ದೇಶ

ಏಪ್ರಿಲ್ ನಿಂದ ಫೋನ್ ಕರೆ ಮೂಲಕ ರೈಲು ಟಿಕೆಟ್ ರದ್ದುಗೊಳಿಸುವ ವ್ಯವಸ್ಥೆ ಜಾರಿಗೆ

ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ರೈಲ್ವೆ ಇಲಾಖೆ, ಈಗಾಗಲೇ ಕಾಯ್ದಿರಿಸಲಾಗಿರುವ ರೈಲ್ವೆ ಟಿಕೆಟ್ ನ್ನು ದೂರವಾಣಿ ಕರೆ ಮೂಲಕ ರದ್ದುಗೊಳಿಸುವ ವ್ಯವಸ್ಥೆಯನ್ನು ಏಪ್ರಿಲ್ ನಿಂದ ಜಾರಿಗೆ ತರಲಿದೆ.

ನವದೆಹಲಿ: ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ರೈಲ್ವೆ ಇಲಾಖೆ,  ಈಗಾಗಲೇ ಕಾಯ್ದಿರಿಸಲಾಗಿರುವ ರೈಲು ಟಿಕೆಟ್ ನ್ನು ದೂರವಾಣಿ ಕರೆ ಮೂಲಕ ರದ್ದುಗೊಳಿಸುವ ವ್ಯವಸ್ಥೆಯನ್ನು ಏಪ್ರಿಲ್ ನಿಂದ ಜಾರಿಗೆ ತರಲಿದೆ. 
ಟಿಕೆಟ್ ಕೌಂಟರ್ ಗಳಿಗೆ ತೆರಳಿ ಕಾಯ್ದಿರಿಸಲಾಗಿರುವ ಟಿಕೆಟ್ ಗಳನ್ನು ರದ್ದುಗೊಳಿಸುವುದಕ್ಕೆ ಸಮಸ್ಯೆ ಎದುರಿಸುವ ಪ್ರಯಾಣಿಕರಿಗೆ ಈ ವ್ಯವಸ್ಥೆ ಉಪಯುಕ್ತವಾಗಲಿದೆ. ಇದಕ್ಕಾಗಿ  ಟಿಕೆಟ್ ಕಾಯ್ದಿರಿಸಿರುವ ಪ್ರಯಾಣಿಕರು ಮಾಡಬೇಕಿರುವುದು ಇಷ್ಟೇ. 139 ಕರೆ ಮಾಡಿ ಕಾಯ್ದಿರಿಸಲಾಗಿರುವ ಟಿಕೆಟ್ ನ ವಿವರಗಳನ್ನು ನೀಡಬೇಕು, ನಂತರ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ದೂರವಾಣಿಗೆ(ಮೊಬೈಲ್ ಗೆ) ಒನ್ ಟೈಮ್ ಪಾಸ್ವರ್ಡ್ ಕಲಿಸಲಾಗುತ್ತದೆ. ಕರೆ ಮಾಡಿದ ದಿನದಂದೇ ಟಿಕೆಟ್ ಕೌಂಟರ್ ಗೆ ಹೋಗಿ ಪಾಸ್ವರ್ಡ್ ನ್ನು ಹೇಳಿದರೆ ಹಣ ವಾಪಸ್ ಪಡೆಯಬಹುದಾಗಿದೆ ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಿಕೆಟ್ ಹಣವನ್ನು ವಾಪಸ್ ಪಡೆಯಬೇಕಾದರೆ ಪ್ರಯಾಣಿಕರು ಹಲವು ಸಮಸ್ಯೆ ಎದುರಿಸುತ್ತಿದ್ದು, ಟಿಕೆಟ್ ಹಣವನ್ನು ನಿಗದಿತ ಸಮಯದಲ್ಲಿ ವಾಪಸ್ ಪಡೆಯುವ ವ್ಯವಸ್ಥೆ ಕಠಿಣವಾಗಿದೆ. ಹೊಸ ನಿಯಮಗಳ ಪ್ರಕಾರ ಟಿಕೆಟ್ ರದ್ದುಗೊಳಿಸುವ ನೈಜ ಪ್ರಯಾಣಿಕರಿಗೆ ಸಹಾಯವಾಗಲೆಂದು ಶುಲ್ಕವನ್ನು ದುಪ್ಪಟ್ಟುಗೊಳಿಸಲಾಗಿದೆ. ಪ್ರಯಾಣಿಕರು ಟಿಕೆಟ್ ಹಣ ವಾಪಸ್ ಪಡೆಯುವುದು ಮತ್ತಷ್ಟು ಸುಲಭವಾಗಿಸಲು ಏಪ್ರಿಲ್ ನಿಂದ ಫೋನ್ ಕರೆ ಮೂಲಕ ರೈಲ್ವೆ ಟಿಕೆಟ್ ರದ್ದುಗೊಳಿಸುವ ವ್ಯವಸ್ಥೆ ಜಾರಿಗೆ ಬರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT