ಸಾಂದರ್ಭಿಕ ಚಿತ್ರ 
ದೇಶ

ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿಯಿಂದ ದೇಶದ ಜನತೆಗೆ ಈಸ್ಟರ್ ಶುಭಾಶಯ

ಈಸ್ಟರ್ ಭಾನುವಾರ ಪ್ರಯುಕ್ತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಹ ರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ಮತ್ತು ಪ್ರಧಾನ ಮಂತ್ರಿ ...

ನವದೆಹಲಿ: ಈಸ್ಟರ್ ಭಾನುವಾರ ಪ್ರಯುಕ್ತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಹ ರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ರಾಷ್ಟ್ರಪತಿಯವರು ತಮ್ಮ ಸಂದೇಶದಲ್ಲಿ, ಪವಿತ್ರವಾದ ದಿನ ಈಸ್ಟರ್ ಹಬ್ಬ ಜೀಸಸ್ ಕ್ರೈಸ್ತರ ಶಾಶ್ವತ ಪ್ರೀತಿ ಮತ್ತು ಮಾನವೀಯತೆಯನ್ನು ನೆನಪಿಸುವ ದಿನವಾಗಿದ್ದು, ಅವರ ಸತ್ಯ, ತ್ಯಾಗ ಮತ್ತು ಕ್ಷಮಾಗುಣ ಜನರಿಗೆ ಸ್ಪೂರ್ತಿಯನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ತಮ್ಮ ಸಂದೇಶದಲ್ಲಿ, ಪ್ರೀತಿ ದ್ವೇಷಕ್ಕಿಂತ ಗಟ್ಟಿಯಾದದ್ದು ಎಂದು ಈಸ್ಟರ್ ಭಾನುವಾರ ಸಾರುತ್ತದೆ.ಈ ಹಬ್ಬ ಜನರಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಂತೋಷವನ್ನು ತರುತ್ತದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಈಸ್ಟರ್ ಹಬ್ಬದ ಪ್ರಯುಕ್ತ ಎಲ್ಲರಿಗೂ ಶುಭಾಶಯಗಳು. ಜೀಸಸ್ ಕ್ರೈಸ್ತರ ಸ್ಪೂರ್ತಿದಾಯಕ ಬೋಧನೆಗಳು ಸೌಹಾರ್ದತೆ ಮತ್ತು ಒಗ್ಗಟ್ಟಿನಿಂದ ಜನರು ಬದುಕಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಶಿಲುಬೆಗೇರಿಸಿದ ನಂತರ ಕ್ರೈಸ್ತರ ಪುನರುತ್ಥಾನದ ದಿನವಾಗಿ ಮತ್ತು ಕಾಲ್ವರಿಯ ಸಾವಿನ ಮಹತ್ವವನ್ನು ಸಾರುವ ದಿನವನ್ನಾಗಿ ಈಸ್ಟರ್ ಭಾನುವಾರ ಹಬ್ಬವನ್ನು ಆಚರಿಸಲಾಗುತ್ತದೆ. ಕ್ರಿಸ್ತಿಯನ್ನರು 40 ದಿನಗಳ ಉಪವಾಸವನ್ನು ಇಂದು ಮುಕ್ತಾಯಗೊಳಿಸುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT