ಮೋದಿ ಮತ್ತು ಅರುಣ್ ಜೈಟ್ಲಿ 
ದೇಶ

ಹೋಳಿಯಂದು ಮೋದಿ ಪೋಸ್ಟರ್‌ಗೆ ಮೊಟ್ಟೆ, ಕಪ್ಪುಶಾಯಿ: 150 ಮಂದಿ ವಿರುದ್ದ ಎಫ್‌ಐಆರ್

ಇತ್ತೀಚೆಗೆ ನಡೆದ ಹೋಳಿಯಂದು ಉದ್ಯಮಿ, ಚಿನ್ನದ ವರ್ತಕರ ಮೆರವಣಿಗೆಯಲ್ಲಿ ಪ್ರಧಾನಿ ಮೋದಿ ಮತ್ತು ವಿತ್ತ ಸಚಿವ ಅರುಣ್ ಜೇಟ್ಲಿಯ ಪೋಸ್ಟರ್ ಗೆ ಕಪ್ಪು ಶಾಯಿ ಹಚ್ಚಿ

ಮೀರತ್:  ಇತ್ತೀಚೆಗೆ ನಡೆದ ಹೋಳಿಯಂದು ಉದ್ಯಮಿ, ಚಿನ್ನದ ವರ್ತಕರ ಮೆರವಣಿಗೆಯಲ್ಲಿ ಪ್ರಧಾನಿ ಮೋದಿ ಮತ್ತು ವಿತ್ತ ಸಚಿವ ಅರುಣ್ ಜೇಟ್ಲಿಯ ಪೋಸ್ಟರ್ ಗೆ ಕಪ್ಪು ಶಾಯಿ ಹಚ್ಚಿ ಮೊಟ್ಟೆಗಳನ್ನು ಎಸೆದಿದ್ದ 150 ಜನರ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ಮೀರತ್ ನ ಉದ್ಯಮಿ ಮುಖಂಡ ರಾಜ್‌ಕುಮಾರ್ ಭಾರದ್ವಾಜ್, ಮೀರತ್ ಬುಲಿಯನ್ ವರ್ತಕರ ಸಂಘದ ಸರ್ವೇಶ್ ಕುಮಾರ್ ಸರಫ್ ಮತ್ತು ಮೂವರು ಸೇರಿದಂತೆ ಐಪಿಸಿ ಸೆಕ್ಷನ್ 147,341 ಮತ್ತು 505 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ , ಇನ್ನು ಉಳಿದ 145 ಜನರ ಹೆಸರು ತಿಳಿದು ಬಂದಿಲ್ಲ.

ಮಾರ್ಚ್ 23 ರಂದು ಹೋಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಚಿನ್ನದ ವ್ಯಾಪಾರಿಗಳು ಮತ್ತು ಉದ್ಯಮಿಗಳ ತಂಡವು ಮೋದಿ ಹಾಗೂ ಅರುಣ್ ಜೇಟ್ಲಿಯವರಿದ್ದ ಪೋಸ್ಟರ್ ಗೆ ಕಪ್ಪುಶಾಯಿ ಹಚ್ಚಿದ್ದರು, ಜೊತೆಗೆ ಮೊಟ್ಟೆಯನ್ನೂ ಒಗೆದಿದ್ದರೆಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.

ಆದರೆ, ಆರೋಪವನ್ನು ನಿರಾಕರಿಸಿರುವ ವರ್ತಕರ ಸಂಘ, ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ, ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಿ ಎಂದು ಆಗ್ರಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT