ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ (ಸಂಗ್ರಹ ಚಿತ್ರ) 
ದೇಶ

ಬ್ರುಸೆಲ್ಸ್ ಸರಣಿ ಸ್ಫೋಟದಲ್ಲಿ ಟೆಕ್ಕಿ ಸಾವು: ಸಂತಾಪ ವ್ಯಕ್ತಪಡಿಸಿದ ಜಯಲಲಿತಾ

ಬ್ರುಸೆಲ್ಸ್ ನಲ್ಲಿ ಕೆಲವು ದಿನಗಳ ಹಿಂದಷ್ಟೇ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿರುವ ತಮಿಳುನಾಡು ಮೂಲದ ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರ ಗಣೇಶನ್ ಅವರ ಸಾವಿಗೆ...

ಚೆನ್ನೈ: ಬ್ರುಸೆಲ್ಸ್ ನಲ್ಲಿ ಕೆಲವು ದಿನಗಳ ಹಿಂದಷ್ಟೇ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿರುವ ತಮಿಳುನಾಡು ಮೂಲದ ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರ ಗಣೇಶನ್ ಅವರ ಸಾವಿಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮಂಗಳವಾರ ಸಂತಾಪ ಸೂಚಿಸಿದ್ದಾರೆ.

ಮಾರ್ಚ್ 22ರಂದು ಬ್ರಸಲ್ಸ್ ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿ 35ಕ್ಕೂ ಹೆಚ್ಚು ಮಂದಿ ಬಲಿಯಾಗಿ 300 ಅಧಿಕ ಮಂದಿ ಗಾಯಗೊಂಡಿದ್ದರು. ಸ್ಫೋಟದ ನಡೆದ ಬಳಿಕ ರಾಘವೇಂದ್ರನ್ ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿತ್ತು. ಇದರಂತೆ ಸ್ಫೋಟದಲ್ಲಿ ಗಣೇಶನ್ ಕೂಡ ಸಾವನ್ನಪ್ಪಿದ್ದಾರೆಂದು ಬ್ರುಸೆಲ್ಸ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಖಚಿತ ಪಡಿಸಿತ್ತು.

ಇದೀಗ ಗಣೇಶನ್ ಅವರ ಸಾವಿಗೆ ಜಯಲಲಿತಾ ಅವರು ಸಂತಾಪ ಸೂಚಿಸಿದ್ದು, ತಮಿಳುನಾಡು ಜಾಗತಿಕ ಸಮುದಾಯದಲ್ಲಿ ಗಣೇಶನ್ ಅವರು ಶ್ರಮ ಜೀವಿಯಾಗಿ ದುಡಿಯುತ್ತಿದ್ದರು. ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದರು ಗಣೇಶನ್ ಅವರ ಸಾವು ನಿಜಕ್ಕೂ ದುರಂತ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT