ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ (ಸಂಗ್ರಹ ಚಿತ್ರ) 
ದೇಶ

ಬ್ರುಸೆಲ್ಸ್ ಸರಣಿ ಸ್ಫೋಟದಲ್ಲಿ ಟೆಕ್ಕಿ ಸಾವು: ಸಂತಾಪ ವ್ಯಕ್ತಪಡಿಸಿದ ಜಯಲಲಿತಾ

ಬ್ರುಸೆಲ್ಸ್ ನಲ್ಲಿ ಕೆಲವು ದಿನಗಳ ಹಿಂದಷ್ಟೇ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿರುವ ತಮಿಳುನಾಡು ಮೂಲದ ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರ ಗಣೇಶನ್ ಅವರ ಸಾವಿಗೆ...

ಚೆನ್ನೈ: ಬ್ರುಸೆಲ್ಸ್ ನಲ್ಲಿ ಕೆಲವು ದಿನಗಳ ಹಿಂದಷ್ಟೇ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿರುವ ತಮಿಳುನಾಡು ಮೂಲದ ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರ ಗಣೇಶನ್ ಅವರ ಸಾವಿಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮಂಗಳವಾರ ಸಂತಾಪ ಸೂಚಿಸಿದ್ದಾರೆ.

ಮಾರ್ಚ್ 22ರಂದು ಬ್ರಸಲ್ಸ್ ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿ 35ಕ್ಕೂ ಹೆಚ್ಚು ಮಂದಿ ಬಲಿಯಾಗಿ 300 ಅಧಿಕ ಮಂದಿ ಗಾಯಗೊಂಡಿದ್ದರು. ಸ್ಫೋಟದ ನಡೆದ ಬಳಿಕ ರಾಘವೇಂದ್ರನ್ ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿತ್ತು. ಇದರಂತೆ ಸ್ಫೋಟದಲ್ಲಿ ಗಣೇಶನ್ ಕೂಡ ಸಾವನ್ನಪ್ಪಿದ್ದಾರೆಂದು ಬ್ರುಸೆಲ್ಸ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಖಚಿತ ಪಡಿಸಿತ್ತು.

ಇದೀಗ ಗಣೇಶನ್ ಅವರ ಸಾವಿಗೆ ಜಯಲಲಿತಾ ಅವರು ಸಂತಾಪ ಸೂಚಿಸಿದ್ದು, ತಮಿಳುನಾಡು ಜಾಗತಿಕ ಸಮುದಾಯದಲ್ಲಿ ಗಣೇಶನ್ ಅವರು ಶ್ರಮ ಜೀವಿಯಾಗಿ ದುಡಿಯುತ್ತಿದ್ದರು. ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದರು ಗಣೇಶನ್ ಅವರ ಸಾವು ನಿಜಕ್ಕೂ ದುರಂತ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT