ತರುಣ್ ಗಗೊಯ್ 
ದೇಶ

ಹಣದಿಂದ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನ: ತರುಣ್ ಗಗೊಯ್

ಸರ್ಕಾರ ಉರುಳಿಸಲು ಬಿಜೆಪಿ 100 ಕೋಟಿ ರು. ಹಣ ವ್ಯಮಾಡುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಆರೋಪಿಸಿದ್ದಾರೆ...

ಗುವಾಹಟಿ: ಸರ್ಕಾರ ಉರುಳಿಸಲು ಬಿಜೆಪಿ 100 ಕೋಟಿ ರು. ಹಣ ವ್ಯಮಾಡುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಆರೋಪಿಸಿದ್ದಾರೆ.

ರಾಜ್ಯಪಾಲರ ನೆರವು ಪಡೆದು ಕೊಂಡು ಬಿಜೆಪಿ ಹಿಮಾಚಲ ಪ್ರದೇಶ ಸರ್ಕಾರವನ್ನು ಕೆಡವುತ್ತಿದೆ. ಎಂದು ಹೇಳಿರುವ ಗಗೋಯ್ ದೇಶದಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಹೆಚ್ಚೆಚ್ಚು ಹಣ ವ್ಯಯಿಸಿ ಅಸ್ಸಾಂ ಸರ್ಕಾರವನ್ನು ಕೆಡವಲು ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ ನ ಕೆಲ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನ ನಡೆಸಿತು. ಆದರೆ ಅದು ಸಫಲವಾಗಲಿಲ್ಲ ಎಂದು ಆರೋಪಿಸಿದ್ದಾರೆ.

ಅಸ್ಸಾಂ ನಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಸಿದ ರ್ಯಾಲಿ ಸಂಬಂಧ ವಾಗ್ದಾಳಿ ನಡೆಸಿದ ಗಗೋಯ್ , ಅಸ್ಸಾಂ ರಾಜ್ಯಪಾಲ ಪದ್ಮನಾಭ ಬಾಲಕೃಷ್ಣ ಆಚಾರ್ಯ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ.ಕೇಂದ್ರ ಸರ್ಕಾರ ಅಸ್ಸಾಂಗೆ ಖಾಯಂ ರಾಜ್ಯಪಾಲರನ್ನು ನೇಮಿಸದೇ ಆರ್ ಎಸ್ ಎಸ್ ನ ವ್ಯಕ್ತಿಗಳನ್ನು ಕಂದು ಕೂರಿಸಿದೆ ಎಂದು ಆರೋಪಿಸಿದ್ದಾರೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT