ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 
ದೇಶ

26/11 ಮುಂಬೈ ದಾಳಿ ತನಿಖೆಗೂ ಭಾರತಕ್ಕೆ ಅವಕಾಶ ನೀಡಿ: ಪಾಕ್'ಗೆ ಒಮರ್ ಅಬ್ದುಲ್ಲಾ

ಪಠಾಣ್ ಕೋಟ್ ದಾಳಿ ತನಿಖೆ ನಡೆಸಲು ಪಾಕಿಸ್ತಾನ ತನಿಖಾ ತಂಡಕ್ಕೆ ಭಾರತ ಅನುಮತಿ ನೀಡಿರುವಂತೆಯೇ ಭಾರತಕ್ಕೂ 26/11 ಮುಂಬೈ ದಾಳಿ ಕುರಿತಂತೆ ಪಾಕಿಸ್ತಾನದಲ್ಲಿ ತನಿಖೆ ನಡೆಸಲು...

ಶ್ರೀನಗರ: ಪಠಾಣ್ ಕೋಟ್ ದಾಳಿ ತನಿಖೆ ನಡೆಸಲು ಪಾಕಿಸ್ತಾನ ತನಿಖಾ ತಂಡಕ್ಕೆ ಭಾರತ ಅನುಮತಿ ನೀಡಿರುವಂತೆಯೇ ಭಾರತಕ್ಕೂ 26/11 ಮುಂಬೈ ದಾಳಿ ಕುರಿತಂತೆ ಪಾಕಿಸ್ತಾನದಲ್ಲಿ ತನಿಖೆ ನಡೆಸಲು ಪಾಕಿಸ್ತಾನ ಸರ್ಕಾರ ಅವಕಾಶ ನೀಡಬೇಕೆಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಂಗಳವಾರ ಹೇಳಿದ್ದಾರೆ.

ಪಠಾಣ್ ಕೋಟ್ ವಾಯುನೆಲೆ ಉಗ್ರರ ದಾಳಿ ಕುರಿತಂತೆ ಇದೀಗ ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಆಗಮಿಸಿ ತನಿಖೆ ನಡೆಸುತ್ತಿದೆ. ಇದಕ್ಕೆ ಅನುಮತಿ ನೀಡಿರುವ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಹಲವು ನಾಯಕರು ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಒಮರ್ ಅಬ್ದುಲ್ಲಾ ಅವರು, ಪಾಕಿಸ್ತಾನ ತನಿಖಾ ತಂಡ ಪಠಾಣ್ ಕೋಟ್ ಗೆ ಭೇಟಿ ನೀಡಿರುವುದರಿಂದ ಭಾರತಕ್ಕಾಗಿರುವ ಪ್ರಯೋಜನಕಾರಿ ಏನೆಂಬುದು ಮುಂದಿನ ದಿನಗಳಲ್ಲಿ ತಿಳಿದುಬರಲಿದೆ. ಆದರೆ, ಇದರಿಂದ ನಮಗೆ ಪ್ರಯೋಜನವಾಗಲಿದೆ ಎಂದು ನಾವು ನಂಬಿದ್ದೇವೆ. ಪ್ರಯೋಜನ ಅಂದರೆ ದಾಳಿ ಮಾಡಿದವರು ಸಿಕ್ಕಿಹಾಕಿಕೊಂಡು ಕಠಿಣ ಶಿಕ್ಷೆ ನೀಡುವುದು ಎಂದರ್ಥ ಎಂದು ಹೇಳಿದ್ದಾರೆ.

ಇದೀಗ ಪಠಾಣ್ ಕೋಟ್ ದಾಳಿ ಕುರಿತಂತೆ ತನಿಖೆ ನಡೆಸಲು ಭಾರತ ಪಾಕಿಸ್ತಾನಕ್ಕೆ ಅವಕಾಶ ನೀಡಿದೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನ ಸರ್ಕಾರ ಕೂಡ ಭಾರತೀಯ ತನಿಖಾ ತಂಡಕ್ಕೆ ಮುಂಬೈ 26/11 ಮುಂಬೈ ದಾಳಿ ಪ್ರಕರಣವನ್ನು ಪಾಕಿಸ್ತಾನದಲ್ಲಿ ತನಿಖೆ ನಡೆಸಲು ಅವಕಾಶ ನೀಡಬೇಕೆಂದು ಹೇಳಿದ್ದಾರೆ.

ಒಂದು ವೇಳೆ ಇಂಡೋ-ಪಾಕ್ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದರೆ, ಜಮ್ಮು ಮತ್ತು ಕಾಶ್ಮೀರಕ್ಕೆ ಸತ್ಯ ಹಾಗೂ ಸಾಮರಸ್ಯದ ಆಯೋಗವನ್ನು ರಚನೆ ಮಾಡಬಹುದು. ಇದರಿಂದ ಜನರಿಗಾಗಿರುವ ಗಾಯಗಳನ್ನು ವಾಸಿ ಮಾಡಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?