ಅಭಿಷೇಕ್ ಮನು ಸಿಂಘ್ವಿ 
ದೇಶ

ಆರ್ ಎಸ್ ಎಸ್ ನಿಯತಕಾಲಿಕೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಾಂಗ್ರೆಸ್ ಮುಖಂಡನ ಲೇಖನ!

ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಪಕ್ಷದ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಆರ್ ಎಸ್ ಎಸ್ ನಿಯತಕಾಲಿಕೆ ಅರ್ಗನೈಜರ್ ನಲ್ಲಿ ವಾಕ್ ಸ್ವಾತಂತ್ರ್ಯದ ಬಗ್ಗೆ ಲೇಖನ ಬರೆದಿದ್ದಾರೆ.

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಪಕ್ಷದ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಆರ್ ಎಸ್ ಎಸ್ ನಿಯತಕಾಲಿಕೆ ಅರ್ಗನೈಜರ್ ನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಲೇಖನ ಬರೆದಿದ್ದಾರೆ.
ಲೇಖನದಲ್ಲಿ ವಾಕ್ ಸ್ವಾತಂತ್ರ್ಯದ ಪರ ನಿಲುವು ಪ್ರಕಟಿಸಿರುವ ಅಭಿಷೇಕ್ ಮನು ಸಿಂಘ್ವಿ, ದೇಶದ್ರೋಹ ಕಾನೂನನ್ನು ಮಿತಿ ಮೀರಿ ಬಳಕೆ ಮಾಡಿಕೊಳ್ಳಲಾಗುತ್ತಿರುವುದರ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಇತ್ತೀಚೆಗೆ ಅಸಾವುದ್ದೀನ್ ಒವೈಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ಸಿಂಘ್ವಿ, ಅಸಾವುದ್ದೀನ್ ಒವೈಸಿ ಹೇಳಿಕೆಗಳನ್ನು ದೇಶದ್ಹದ ಆರೋಪದಡಿ ಸೇರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. 
ನಾನು ಕನ್ಹಯ್ಯ ಕುಮಾರ್, ಅಸಾವುದ್ದೀನ್ ಒವೈಸಿ ಮಾತನಾಡಿದಂತೆ ಮಾತನಾಡಲು ಇಷ್ಟಪಡುವುದಿಲ್ಲ. ಅವರ ಕೆಲವು ಹೇಳಿಕೆಗಳು ಖಂಡನಾರ್ಹವಾಗಿದ್ದರೂ ಅದನ್ನು ರಾಷ್ಟ್ರದ್ರೋಹ ಎಂದು ಹೇಳಲು ಸಾಧ್ಯವಿಲ್ಲ, ಇಂತಹ ಮನಸ್ಥಿತಿಯೇ ನಮಗೂ ಪಾಕಿಸ್ತಾನಕ್ಕೂ ಇರುವ ವ್ಯತ್ಯಾಸವನ್ನು ತಿಳಿಸುತ್ತದೆ ಎಂದು ಸಿಂಘ್ವಿ  ಅರ್ಗನೈಜರ್ ಗೆ ಬರೆದಿರುವ ಲೇಖನದಲ್ಲಿ ತಿಳಿಸಿದ್ದಾರೆ.  ಕಾಂಗ್ರೆಸ್ ಮುಖಂಡನಾಗಿದ್ದು ಆರ್ ಎಸ್ ಎಸ್ ನ ನಿಯತಕಾಲಿಕೆಗೆ ಲೇಖನ ಬರೆದಿರುವುದನ್ನು ಸಮರ್ಥಿಸಿಕೊಂಡಿರುವ ಸಿಂಘ್ವಿ, ಇದೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT