ಇರೋಮ್‌ ಶರ್ಮೀಳಾ 
ದೇಶ

ಆತ್ಮಹತ್ಯೆ ಯತ್ನ ಕೇಸ್‌ನಿಂದ ಇರೋಮ್‌ ಶರ್ಮೀಳಾ ಖುಲಾಸೆ

2006ರಲ್ಲಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಮಣಿಪುರದ ಮಾನವ ಹಕ್ಕು ಕಾರ್ಯಕರ್ತೆ...

ನವದೆಹಲಿ: 2006ರಲ್ಲಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಮಣಿಪುರದ ಮಾನವ ಹಕ್ಕು ಕಾರ್ಯಕರ್ತೆ ಇರೋಮ್‌ ಶರ್ಮೀಳಾ ಅವರನ್ನು ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ ಖುಲಾಸೆ ಮಾಡಿದೆ.
2006ರ ಅಕ್ಟೋಬರ್‌ 4ರಂದು ಜಂತರ್‌ ಮಂತರ್‌ನಲ್ಲಿ ಶರ್ಮೀಳಾ ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು 2013ರ ಮಾರ್ಚ್‌ 4ರಂದು ವಿಚಾರಣೆಗೆ ಗುರಿಪಡಿಸಲಾಗಿತ್ತು.
ಮಣಿಪುರದಲ್ಲಿ ಹೇರಲಾಗಿರುವ ಸಶಸ್ತ್ರ ಪಡೆಗಳ ವಿಶೇಷಾಧಿಕಾರಿ ಕಾಯಿದೆಯನ್ನು ತೆರವು ಗೊಳಿಸಬೇಕೆಂದು ಆಗ್ರಹಿಸಿ 42ರ ಹರೆಯದ ಶರ್ಮೀಳಾ ಅವರು ಕಳೆದ 16 ವರ್ಷಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯಿದೆಯನ್ನು ತೆರವುಗೊಳಿಸಿದ್ದೇ ಆದಲ್ಲಿ ತಾನು ತನ್ನ ನಿರಶನ ಸತ್ಯಾಗ್ರಹವನ್ನು ಇಂದೇ ಕೊನೆಗೊಳಿಸಲು ಸಿದ್ಧನಿದ್ದೇನೆ ಎಂದು ಶರ್ಮೀಳಾ ಅವರು ನಿನ್ನೆ ಕೋರ್ಟಿಗೆ ಹೇಳಿದ್ದರು . ಮಾತ್ರವಲ್ಲದೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡು ಮಾತನಾಡಲು ಬಯಿಸಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT