ಸಿಆರ್ ಪಿಎಫ್ ಯೋಧ ಕೇರಳ ಮೂಲದ ಅನಿಲ್ ಅಚನ್ಕುಂಜು 
ದೇಶ

ನನ್ನ ಪತಿಯನ್ನು ನಾಯಿಯಂತೆ ನಡೆಸಿಕೊಳ್ಳಲಾಗಿದೆ: ಮಡಿದ ಯೋಧನ ಪತ್ನಿ

ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದ ನನ್ನ ಪತಿಯ ಪಾರ್ಥೀವ ಶರೀರಕ್ಕೆ ಅಧಿಕಾರಿಗಳು ಅಗೌರವವನ್ನು ಸೂಚಿಸಿದ್ದು, ನಾಯಿಯಂತೆ ನಡೆಸಿಕೊಂಡಿದ್ದಾರೆಂದು...

ಆಲಪುಳ (ಕೇರಳ): ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದ ನನ್ನ ಪತಿಯ ಪಾರ್ಥೀವ ಶರೀರಕ್ಕೆ ಅಧಿಕಾರಿಗಳು ಅಗೌರವವನ್ನು ಸೂಚಿಸಿದ್ದು, ನಾಯಿಯಂತೆ ನಡೆಸಿಕೊಂಡಿದ್ದಾರೆಂದು ಮಡಿದ ಯೋಧನ ಪತ್ನಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಕೇರಳ ಮೂಲದ ಅನಿಲ್ ಅಚನ್ಕುಂಜು (33) ಸಿಆರ್ ಪಿಎಫ್ ಯೋಧರಾಗಿದ್ದು, ಮಾರ್ಚ್ 24 ರಂದು ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟಿದ್ದರು. ನಂತರ ಯೋಧನ ಪಾರ್ಥೀವ ಶರೀರವನ್ನು ಕುಟುಂಬಸ್ಥರಿಗೆ ನೀಡಿದ್ದ ಅಧಿಕಾರಿಗಳು, ಪಾರ್ಥೀವ ಶರೀರಕ್ಕೆ ಬಟ್ಟೆಯನ್ನು ಹೊದಿಸದೆ ಪ್ಲಾಸ್ಟಿಕ್ ಕವರ್ ನ್ನು ಹಾಕುವ ಮೂಲಕ ಅಗೌರವವನ್ನು ಸೂಚಿಸಿದ್ದಾರೆ. ಅಧಿಕಾರಿಗಳ ಈ ನಿರ್ಲಕ್ಷ್ಯ ಹಾಗೂ ಅಗೌರವ ವರ್ತನೆ ಇದೀಗ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ಸಿಆರ್ ಪಿಎಫ್ ಅಧಿಕಾರಿಗಳು ಹಾಗೂ ಗೃಹ ಸಚಿವಾಲಯದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಮಡಿದ ಯೋಧನ ಪತ್ನಿ ಲಿನಿ ಅವರು, ನನ್ನ ಪತಿಯ ಸ್ಥಾನದಲ್ಲಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದರೆ ಅವರಿಗೆ ಈ ರೀತಿಯಾಗಿ ನಡೆಸಿಕೊಳ್ಳುತ್ತಿದ್ದರೇ? ನನ್ನ ಪತಿ ಯೋಧನಾಗಿರುವ ಕಾರಣ ಅಧಿಕಾರಿಗಳು ಈ ರೀತಿಯಾಗಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮಡಿದ ಯೋಧ ನನ್ನ ಕ್ಷೇತ್ರದವರಾಗಿದ್ದು, ನನಗೆ ಗೊತ್ತಿರುವ ವ್ಯಕ್ತಿಯಾಗಿದ್ದಾರೆ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ನಿಭಾಯಿಸಲಿದೆ. ಇನ್ನು ಪ್ರಕರಣ ಸಂಬಂಧ ಗೃಹ ಸಚಿವಾಲಯದೊಂದಿಗೆ ಮಾತುಕತೆ ನಡೆಸಲಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆಂದು ಕೇರಳ ರಾಜ್ಯ ಗೃಹ ಸಚಿವ ರಮೇಶ್ ಚೆನ್ನಿತಾಳ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT