ನರೇಂದ್ರ ಮೋದಿ ಹಾಗೂ ಕುಸಿದು ಬಿದ್ದಿರುವ ವಿವೇಕಾನಂದ ಫ್ಲೈಓವರ್ 
ದೇಶ

ಕೋಲ್ಕತಾ ಫ್ಲೈ ಓವರ್ ದುರಂತ: ಬೇಸರ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಕೋಲ್ಕತಾದಲ್ಲಿ ಸಂಭವಿಸಿರುವ ಫ್ಲೈ ಓವರ್ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಆಶ್ಚರ್ಯ ಹಾಗೂ ಬೇಸರವನ್ನು ವ್ಯಕ್ತಪಡಿಸಿದ್ದಾರೆ...

ನವದೆಹಲಿ: ಕೋಲ್ಕತಾದಲ್ಲಿ ಸಂಭವಿಸಿರುವ ಫ್ಲೈ ಓವರ್ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಆಘಾತ ಹಾಗೂ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೋಲ್ಕತಾ ಫ್ಲೈ ಓವರ್ ಘಟನೆ ಆಘಾತವನ್ನುಂಟು ಮಾಡಿದ್ದು, ಬೇಸರವನ್ನು ತಂದಿದೆ. ಪರಿಸ್ಥಿತಿ ಹಾಗೂ ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ, ಅಲ್ಲದೆ, ಮೃತಪಟ್ಟವರಿಗೆ ಸಂತಾಪವನ್ನು ಸೂಚಿಸಿದ್ದು, ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಇನ್ನು ಘಟನೆ ಕುರಿತಂತೆ ಟ್ಟಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು, ದುರಂತ ಕುರಿತಂತೆ ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಫೋನಿನ ಮೂಲಕ ಸಂಭಾಷಣೆ ನಡೆಸಲಾಗಿದೆ. ವಿಪತ್ತು ನಿರ್ವಹಣ ಪಡೆ (ಎನ್ ಡಿಆರ್"ಎಫ್) ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಇದರಂತೆ ಈಗಾಗಲೇ ಫ್ಲೈ ಓವರ್ ನ ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣಾ ಕಾರ್ಯಾಚರಣೆಯನ್ನು ಎನ್ ಡಿಆರ್ ಎಫ್ ಪಡೆ ಮಾಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT