ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ 
ದೇಶ

ಫ್ಲೈ ಓವರ್ ದುರಂತ: ಸಿಬಿಐ ತನಿಖೆಗೆ ನಖ್ವಿ ಆಗ್ರಹ

ಉತ್ತರ ಕೋಲ್ಕತಾದಲ್ಲಿ ಸಂಭವಿಸಿದ ಫ್ಲೈ ಓವರ್ ದುರಂತವನ್ನು ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಗುರುವಾರ ಆಗ್ರಹಿಸಿದ್ದಾರೆ...

ಕೋಲ್ಕತಾ: ಉತ್ತರ ಕೋಲ್ಕತಾದಲ್ಲಿ ಸಂಭವಿಸಿದ ಫ್ಲೈ ಓವರ್ ದುರಂತವನ್ನು ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಗುರುವಾರ ಆಗ್ರಹಿಸಿದ್ದಾರೆ.

ಘಟನೆ ಕುರಿತಂತೆ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ವಿಮಾನ ನಿಲ್ದಾಣಕ್ಕೆ ಬಂದ ನಂತರ ದುರಾದೃಷ್ಟಕರ ವಿಚಾರದ ಬಗ್ಗೆ ತಿಳಿದುಕೊಂಡೆ. ಸುದ್ದಿ ತಿಳಿಯುತ್ತಿದ್ದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಹಾಗೂ ರಕ್ಷಣಾ ಸಚಿವರಿಗೆ ಕರೆ ಮಾಡಲಾಯಿತು. ಸಂಭಾಷಣೆ ವೇಳೆ ಅಧಿಕಾರಿಗಳ ಬಳಿ ಸಾಧ್ಯವಾದಷ್ಟು ನೆರವು ಹಾಗೂ ಪರಿಹಾರ ನೀಡುವಂತೆ ಮನವಿಯನ್ನು ಮಾಡಿಕೊಂಡಿದ್ದೇನೆಂದು ಹೇಳಿದ್ದಾರೆ.

ಇದರಂತೆ ಎನ್ ಡಿಆರ್ ಎಫ್ ಪಡೆ ಪರಿಹಾರ ಕಾರ್ಯದಲ್ಲಿ ತೊಡಗಿಸುವಂತೆಯೂ ಅಧಿಕಾರಿಗಳ ಬಳಿ ಮನವಿ ಮಾಡಿದ್ದೇನೆ. ರಾಜ್ಯ ಸರ್ಕಾರ ಪರಿಹಾರ ಕಾರ್ಯವನ್ನು ಸರಿಯಾದ ರೀತಿಯಲ್ಲಿ ಮಾಡಬೇಕಿದೆ. ದುರ್ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದರೆ, ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಬೇಕು. ಘಟನೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಘಟನಾ ಸ್ಥಳಕ್ಕೆ ಪ್ರಸ್ತುತ ಭೇಟಿ ನೀಡುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕುಂಟಾಗುತ್ತದೆ. ಹೀಗಾಗಿ ಸ್ಥಳಕ್ಕೆ ನಾನು ಭೇಟಿ ನೀಡುವುದಿಲ್ಲ. ಗಾಯಾಳುಗಳನ್ನು ನೋಡಲು ಆಸ್ಪತ್ರೆಗೆ ಭೇಟಿ ನೀಡುತ್ತೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

SCROLL FOR NEXT