ಸಿಆರ್ ಪಿಎಫ್ ಅಧಿಕಾರಿ ಕೆ. ದುರ್ಗಾ ಪ್ರಸಾದ್ 
ದೇಶ

ದಂತೇವಾಡದಲ್ಲಿ ನಕ್ಸಲರ ಸ್ಫೋಟ: 3 ಯೋಧರು ಗುಂಡೇಟು ಬಿದ್ದು ಹುತಾತ್ಮರಾಗಿದ್ದರು-ಅಧಿಕಾರಿ

ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಮಾವೋವಾದಿ ಉಗ್ರರು ನಡೆಸಿರುವ ಭೀಕರ ಸ್ಫೋಟದಲ್ಲಿ ಸಾವನ್ನಪ್ಪಿದ್ದ 7 ಯೋಧರ ಪೈಕಿ ಮೂವರು ಯೋಧರು ಗುಂಡೇಟು ಬಿದ್ದು ಸಾವನ್ನಪ್ಪಿದ್ದರು...

ನವದೆಹಲಿ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಮಾವೋವಾದಿ ಉಗ್ರರು ನಡೆಸಿರುವ ಭೀಕರ ಸ್ಫೋಟದಲ್ಲಿ ಸಾವನ್ನಪ್ಪಿದ್ದ 7 ಯೋಧರ ಪೈಕಿ ಮೂವರು ಯೋಧರು ಗುಂಡೇಟು ಬಿದ್ದು ಸಾವನ್ನಪ್ಪಿದ್ದರು ಎಂದು ಸಿಆರ್ ಪಿಎಫ್ ಡೈರೆಕ್ಟರ್ ಜನರಲ್ ಕೆ. ದುರ್ಗಾ ಪ್ರಸಾದ್ ಅವರು ಶುಕ್ರವಾರ ಹೇಳಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು, ನಕ್ಸಲರು ಸ್ಫೋಟಿಸುವುದಕ್ಕೂ ಮುನ್ನ ಮೂವರು ಯೋಧರ ತಲೆಗೆ ಹಾಗೂ ಭುಜಕ್ಕೆ ಗುಂಡು ಹಾರಿಸಿದ್ದರು. ಯೋಧರು ಬದುಕುಳಿದಿದ್ದಾರೋ ಅಥವಾ ಸಾವನ್ನಪ್ಪಿದ್ದಾರೋ ಎಂಬುದರ ಬಗ್ಗೆ ಅನುಮಾನಗಳಿವೆ. ಆದರೆ, ನಕ್ಸಲರು ಐಇಡಿ ಸ್ಫೋಟಿಸಿದ ಬಳಿಕ 4 ಯೋಧರು ಸಾವನ್ನಪ್ಪಿದ್ದರು. ಸ್ಫೋಟಿಸಿದ ಬಳಿಗ ನಕ್ಸಲರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಯೋಧರು ಬದುಕಿದ್ದಾರೋ ಅಥವಾ ಸಾವನ್ನಪ್ಪಿದ್ದಾರೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಪರಿಶೀಲನೆ ನಡೆಸಿದ್ದರು ಎಂದು ಹೇಳಿದ್ದಾರೆ.

ಸಿಆರ್‌ಪಿಎಫ್'ನ 230ನೇ ಬೆಟಾಲಿಯನ್‌ನ ಜವಾನರು ಸಾಗುತ್ತಿದ್ದ ವಾಹನವನ್ನು ಗುರಿಯಾಗಿರಿಸಿಕೊಂಡಿದ್ದ ಮಾವೋವಾದಿ ಉಗ್ರರು ಮಾರ್ಚ್ 30ರಂದು ಮೋಖಪಾಲ್‌ ಎಂಬ ಹಳ್ಳಿಗೆ ಸಮೀಪದಲ್ಲಿ ನೆಲ ಬಾಂಬ್‌ ಸ್ಫೋಟಿಸಿದ್ದರು. ಪರಿಣಾಮ ಏಳು ಮಂದಿ ಜವಾನರು ಹತರಾಗಿದ್ದಾರೆಂದು ಎಂದು ಹೇಳಲಾಗುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT