ಸಚಿವೆ ಸಾಧ್ವಿ ನಿರಂಜನ್ 
ದೇಶ

ಭಾರತ ಮಾತಾ ಕಿ ಜೈ ವಿರುದ್ಧ ಫತ್ವಾ: ಸಾಧ್ವಿ ನಿರಂಜನ್ ಜ್ಯೋತಿ ಖಂಡನೆ

ಭಾರತ್ ಮಾತಾ ಕಿ ಜೈ ವಿರುದ್ಧ ಇಸ್ಲಾಮಿಕ್ ಸೆಮಿನರಿ ದಾರುಲ್ ಉಲೂಂನ ಫತ್ವಾ ಇಲಾಖೆ ಹೊರಡಿಸಿರುವ ಫತ್ವಾವನ್ನು ರಾಜ್ಯ ಆಹಾರ ಸಂಸ್ಕರಣ ಸಚಿವೆ ಸಾಧ್ವಿ...

ಲಖನೌ: ಭಾರತ್ ಮಾತಾ ಕಿ ಜೈ ವಿರುದ್ಧ ಇಸ್ಲಾಮಿಕ್ ಸೆಮಿನರಿ ದಾರುಲ್ ಉಲೂಂನ ಫತ್ವಾ ಇಲಾಖೆ ಹೊರಡಿಸಿರುವ ಫತ್ವಾವನ್ನು ರಾಜ್ಯ ಆಹಾರ ಸಂಸ್ಕರಣ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿಯವರು ಶುಕ್ರವಾರ ಖಂಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಭಾರತ್ ಮಾತಾಕಿ ಜೈ ವಿರುದ್ಧ ಫತ್ವಾ ಹೊರಡಿಸಿರುವುದು ಇಸ್ಲಾಂ ಮೂಲಭೂತವಾದಿಗಳ ಪರವಾಗಿರುವುದನ್ನು ತೋರಿಸುತ್ತದೆ. ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ಯೋಧರಿಗೆ ಇದು ಅವಮಾನ ಮಾಡಿದಂತೆ.

ಫತ್ವಾ ಹೊರಡಿಕೆಯಿಂದ ಅವರ ಮನಃಸ್ಥಿತಿ ಹೇಗಿದೆ ಎಂಬುದನ್ನು ತೋರಿಸುತ್ತದೆ. ಫತ್ವಾ ಹೊರಡಿಸಿದವರು ಮೊದಲು ಅವರು ಪಾಕಿಸ್ತಾನದಲ್ಲಿ ಜೀವನ ನಡೆಸುತ್ತಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಭಾರತ್ ಮಾತಾ ಕಿ ಜೈ ಘೋಷಣೆ ವಿರೋಧಿಸಿ ಹೈದರಾಬಾದ್ ನ ಇಸ್ಲಾಮಿಕ್ ಸೆಮಿನರಿ ಜಾಮಿಯಾ ನಿಝಾಮಿಯಾ ಇಲಾಖೆಯೊಂದು ಫತ್ವಾ ಹೊರಡಿಸಿರುವುದಾಗಿ ಹೇಳಲಾಗುತ್ತಿತ್ತು. ಈ ಫತ್ವಾವನ್ನು ಕಳೆದ ತಿಂಗಳು ಹೊರಡಿಸಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಸ್ಲಾಮಿಕ್ ಸೆಮಿನರಿ ದಾರುಲ್ ಉಲೂಂನ ಫತ್ವಾ ಇಲಾಖೆ ಸೆಮಿನರಿ ಹೊರಡಿಸಿರುವ ಫತ್ವಾದಲ್ಲಿ, ಇಸ್ಲಾಂ ಧರ್ಮವು ಮೂರ್ತಿ ಪೂಜೆಯನ್ನು ಅನುಮತಿಸದಿರುವುದರಿಂದ ಈ ಧರ್ಮದ ಅನುಯಾಯಿಗಳು ಭಾರತ್ ಮಾತಾ ಕಿ ಜೈ ಘೋಷಣೆ ಕೂಗಬಾರದು. ಮನುಷ್ಯರು ಮಾತ್ರ ಮನುಷ್ಯರಿಗೆ ಜನ್ಮ ನೀಡಲು ಸಾಧ್ಯ. ಭೂಮಿ ಜನ್ಮದಾತೆ ಆಗಲು ಸಾಧ್ಯವಿಲ್ಲ.

ಭಾರತವು ಭೂಮಿಯನ್ನು ದೇವತೆ ಎಂದು ಪೂಜಿಸುತ್ತದೆ. ಅದು ಅವರ ವೈಯಕ್ತಿಕ ನಂಬಿಕೆ. ನಾವು ನಮ್ಮ ದೇಶವನ್ನು ಪ್ರೀತಿಸುತ್ತೇವೆ. ಆದರೆ, ಪೂಜಿಸುವುದಿಲ್ಲ. ಇಸ್ಲಾಂ ಧರ್ಮ ಕೇವಲ ಒಂದು ದೇವರನ್ನು ಮಾತ್ರ ಪೂಜಿಸುತ್ತದೆ ಎಂದು ಹೇಳಲಾಗಿದೆ. ಇದೀಗ ಈ ಫತ್ವಾ ಹಲವು ವಿರೋಧಕ್ಕೆ ಕಾರಣವಾಗಿದ್ದು, ಟೀಕೆಗಳು ವ್ಯಕ್ತವಾಗುತ್ತಿವೆ.

ಈ ಹಿಂದೆ ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಸಭೆಯಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು ಕೇಳಿಬಂದಿವೆ. ಪ್ರತಿಯೊಬ್ಬರೂ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗವಂತಾಗಬೇಕು. ಯುವಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಇದು ಪೂರಕವಾಗಬೇಕೆಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಹೈದರಾಬಾದ್ ನ ಸಂಸದ ಓವೈಸಿ, ನನ್ನ ಕುತ್ತಿಗೆ ಮೇಲೆ ಚೂರಿ ಇಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ. ಘೋಷಣೆಯನ್ನು ಕೂಗಿ, ದೇಶಭಕ್ತಿ ಸಾಬೀತುಪಡಿಸಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಹಾಗಾಗಿ ಕಾನೂನು ಉಲ್ಲಂಘನೆಯ ಪ್ರಶ್ನೆ ಇಲ್ಲಿ ಹುಟ್ಟುವುದಿಲ್ಲ. ಈ ನಿಲುವಿಗೆ ನಾನು ಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಘೋಷಣೆ ಕೂಗುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT