ಸಚಿವೆ ಸಾಧ್ವಿ ನಿರಂಜನ್ 
ದೇಶ

ಭಾರತ ಮಾತಾ ಕಿ ಜೈ ವಿರುದ್ಧ ಫತ್ವಾ: ಸಾಧ್ವಿ ನಿರಂಜನ್ ಜ್ಯೋತಿ ಖಂಡನೆ

ಭಾರತ್ ಮಾತಾ ಕಿ ಜೈ ವಿರುದ್ಧ ಇಸ್ಲಾಮಿಕ್ ಸೆಮಿನರಿ ದಾರುಲ್ ಉಲೂಂನ ಫತ್ವಾ ಇಲಾಖೆ ಹೊರಡಿಸಿರುವ ಫತ್ವಾವನ್ನು ರಾಜ್ಯ ಆಹಾರ ಸಂಸ್ಕರಣ ಸಚಿವೆ ಸಾಧ್ವಿ...

ಲಖನೌ: ಭಾರತ್ ಮಾತಾ ಕಿ ಜೈ ವಿರುದ್ಧ ಇಸ್ಲಾಮಿಕ್ ಸೆಮಿನರಿ ದಾರುಲ್ ಉಲೂಂನ ಫತ್ವಾ ಇಲಾಖೆ ಹೊರಡಿಸಿರುವ ಫತ್ವಾವನ್ನು ರಾಜ್ಯ ಆಹಾರ ಸಂಸ್ಕರಣ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿಯವರು ಶುಕ್ರವಾರ ಖಂಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಭಾರತ್ ಮಾತಾಕಿ ಜೈ ವಿರುದ್ಧ ಫತ್ವಾ ಹೊರಡಿಸಿರುವುದು ಇಸ್ಲಾಂ ಮೂಲಭೂತವಾದಿಗಳ ಪರವಾಗಿರುವುದನ್ನು ತೋರಿಸುತ್ತದೆ. ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ಯೋಧರಿಗೆ ಇದು ಅವಮಾನ ಮಾಡಿದಂತೆ.

ಫತ್ವಾ ಹೊರಡಿಕೆಯಿಂದ ಅವರ ಮನಃಸ್ಥಿತಿ ಹೇಗಿದೆ ಎಂಬುದನ್ನು ತೋರಿಸುತ್ತದೆ. ಫತ್ವಾ ಹೊರಡಿಸಿದವರು ಮೊದಲು ಅವರು ಪಾಕಿಸ್ತಾನದಲ್ಲಿ ಜೀವನ ನಡೆಸುತ್ತಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಭಾರತ್ ಮಾತಾ ಕಿ ಜೈ ಘೋಷಣೆ ವಿರೋಧಿಸಿ ಹೈದರಾಬಾದ್ ನ ಇಸ್ಲಾಮಿಕ್ ಸೆಮಿನರಿ ಜಾಮಿಯಾ ನಿಝಾಮಿಯಾ ಇಲಾಖೆಯೊಂದು ಫತ್ವಾ ಹೊರಡಿಸಿರುವುದಾಗಿ ಹೇಳಲಾಗುತ್ತಿತ್ತು. ಈ ಫತ್ವಾವನ್ನು ಕಳೆದ ತಿಂಗಳು ಹೊರಡಿಸಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಸ್ಲಾಮಿಕ್ ಸೆಮಿನರಿ ದಾರುಲ್ ಉಲೂಂನ ಫತ್ವಾ ಇಲಾಖೆ ಸೆಮಿನರಿ ಹೊರಡಿಸಿರುವ ಫತ್ವಾದಲ್ಲಿ, ಇಸ್ಲಾಂ ಧರ್ಮವು ಮೂರ್ತಿ ಪೂಜೆಯನ್ನು ಅನುಮತಿಸದಿರುವುದರಿಂದ ಈ ಧರ್ಮದ ಅನುಯಾಯಿಗಳು ಭಾರತ್ ಮಾತಾ ಕಿ ಜೈ ಘೋಷಣೆ ಕೂಗಬಾರದು. ಮನುಷ್ಯರು ಮಾತ್ರ ಮನುಷ್ಯರಿಗೆ ಜನ್ಮ ನೀಡಲು ಸಾಧ್ಯ. ಭೂಮಿ ಜನ್ಮದಾತೆ ಆಗಲು ಸಾಧ್ಯವಿಲ್ಲ.

ಭಾರತವು ಭೂಮಿಯನ್ನು ದೇವತೆ ಎಂದು ಪೂಜಿಸುತ್ತದೆ. ಅದು ಅವರ ವೈಯಕ್ತಿಕ ನಂಬಿಕೆ. ನಾವು ನಮ್ಮ ದೇಶವನ್ನು ಪ್ರೀತಿಸುತ್ತೇವೆ. ಆದರೆ, ಪೂಜಿಸುವುದಿಲ್ಲ. ಇಸ್ಲಾಂ ಧರ್ಮ ಕೇವಲ ಒಂದು ದೇವರನ್ನು ಮಾತ್ರ ಪೂಜಿಸುತ್ತದೆ ಎಂದು ಹೇಳಲಾಗಿದೆ. ಇದೀಗ ಈ ಫತ್ವಾ ಹಲವು ವಿರೋಧಕ್ಕೆ ಕಾರಣವಾಗಿದ್ದು, ಟೀಕೆಗಳು ವ್ಯಕ್ತವಾಗುತ್ತಿವೆ.

ಈ ಹಿಂದೆ ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಸಭೆಯಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು ಕೇಳಿಬಂದಿವೆ. ಪ್ರತಿಯೊಬ್ಬರೂ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗವಂತಾಗಬೇಕು. ಯುವಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಇದು ಪೂರಕವಾಗಬೇಕೆಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಹೈದರಾಬಾದ್ ನ ಸಂಸದ ಓವೈಸಿ, ನನ್ನ ಕುತ್ತಿಗೆ ಮೇಲೆ ಚೂರಿ ಇಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ. ಘೋಷಣೆಯನ್ನು ಕೂಗಿ, ದೇಶಭಕ್ತಿ ಸಾಬೀತುಪಡಿಸಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಹಾಗಾಗಿ ಕಾನೂನು ಉಲ್ಲಂಘನೆಯ ಪ್ರಶ್ನೆ ಇಲ್ಲಿ ಹುಟ್ಟುವುದಿಲ್ಲ. ಈ ನಿಲುವಿಗೆ ನಾನು ಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಘೋಷಣೆ ಕೂಗುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT