ಸಾಂದರ್ಭಿಕ ಚಿತ್ರ 
ದೇಶ

ರಕ್ತ ಚಂದನ ಕಳ್ಳಸಾಗಣೆ ಮಾಡಲು ಯತ್ನಿಸಿದ ಆರು ಮಂದಿ ಬಂಧನ

ಸುಮಾರು 15 ಲಕ್ಷ ರೂಪಾಯಿ ಬೆಲೆಬಾಳುವ ರಕ್ತ ಚಂದನ ತುಂಡುಗಳನ್ನು ಕಳ್ಳ ಸಾಗಣೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಆರು ಮಂದಿಯನ್ನು...

ಕಡಪಾ: ಸುಮಾರು 15 ಲಕ್ಷ ರೂಪಾಯಿ ಬೆಲೆಬಾಳುವ ರಕ್ತ ಚಂದನ ತುಂಡುಗಳನ್ನು ಕಳ್ಳ ಸಾಗಣೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಆರು ಮಂದಿಯನ್ನು ಆಂಧ್ರಪ್ರದೇಶದ ಕಡಪ ಸಮೀಪ ಮೈದುಕುರ್ ಪೊಲೀಸರು ಬಂಧಿಸಿದ್ದಾರೆ.

ಇಂದು ಮುಂಜಾನೆ ಮೈದುಕುರು ಪ್ರದೇಶದ ಬೈರವ ಕೋನ ಅರಣ್ಯ ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿಸಿದ ಕಳ್ಳಸಾಗಣೆದಾರರನ್ನು ಮಾಧ್ಯಮದ ಮುಂದೆ ಹಾಜರುಪಡಿಸಿದ ಮೈದುಕುರ್ ಡಿಎಸ್ಪಿ ಎಂ.ರಾಮಕೃಷ್ಣಯ್ಯ, ಆರೋಪಿಗಳು ರಕ್ತ ಚಂದನದ ತುಂಡುಗಳನ್ನು ಕದ್ದು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದ ಆಧಾರದ ಮೇಲೆ ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿ ಅರಣ್ಯ ಪ್ರದೇಶದಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 25 ರಕ್ತ ಚಂದನ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಬಂಧಿತರಾದವರನ್ನು ಆಂಧ್ರಪ್ರದೇಶದ ಪ್ರಕಾಸಂ ಜಿಲ್ಲೆಯ ಎಸ್.ರಾತಯ್ಯ, ಕೆ.ನಾರಾಯಣ, ಪಿ.ಪ್ರಸಾದ್, ಎ.ರಾತಯ್ಯ, ಕೆ.ವೆಂಕಟರೆಡ್ಡಿ ಹಾಗೂ ಮೈದುಕುರ್ ಮಂಡಲ್ ನ ಪಿ.ವಿಷ್ಣುವರ್ಧನ ರೆಡ್ಡಿ ಎಂದು ಗುರುತಿಸಲಾಗಿದೆ.

ರಕ್ತ ಚಂದನದ ಜೊತೆ ಅದನ್ನು ಕಟ್ಟಲು ಬಳಸುತ್ತಿದ್ದ ಉಪಕರಣ, ಹಗ್ಗ ಹಾಗೂ ಸಾಗಿಸಲು ಬಳಸಿದ ಸೈಕಲನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT