ಸಾಂದರ್ಭಿಕ ಚಿತ್ರ 
ದೇಶ

ರಕ್ತ ಚಂದನ ಕಳ್ಳಸಾಗಣೆ ಮಾಡಲು ಯತ್ನಿಸಿದ ಆರು ಮಂದಿ ಬಂಧನ

ಸುಮಾರು 15 ಲಕ್ಷ ರೂಪಾಯಿ ಬೆಲೆಬಾಳುವ ರಕ್ತ ಚಂದನ ತುಂಡುಗಳನ್ನು ಕಳ್ಳ ಸಾಗಣೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಆರು ಮಂದಿಯನ್ನು...

ಕಡಪಾ: ಸುಮಾರು 15 ಲಕ್ಷ ರೂಪಾಯಿ ಬೆಲೆಬಾಳುವ ರಕ್ತ ಚಂದನ ತುಂಡುಗಳನ್ನು ಕಳ್ಳ ಸಾಗಣೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಆರು ಮಂದಿಯನ್ನು ಆಂಧ್ರಪ್ರದೇಶದ ಕಡಪ ಸಮೀಪ ಮೈದುಕುರ್ ಪೊಲೀಸರು ಬಂಧಿಸಿದ್ದಾರೆ.

ಇಂದು ಮುಂಜಾನೆ ಮೈದುಕುರು ಪ್ರದೇಶದ ಬೈರವ ಕೋನ ಅರಣ್ಯ ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿಸಿದ ಕಳ್ಳಸಾಗಣೆದಾರರನ್ನು ಮಾಧ್ಯಮದ ಮುಂದೆ ಹಾಜರುಪಡಿಸಿದ ಮೈದುಕುರ್ ಡಿಎಸ್ಪಿ ಎಂ.ರಾಮಕೃಷ್ಣಯ್ಯ, ಆರೋಪಿಗಳು ರಕ್ತ ಚಂದನದ ತುಂಡುಗಳನ್ನು ಕದ್ದು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದ ಆಧಾರದ ಮೇಲೆ ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿ ಅರಣ್ಯ ಪ್ರದೇಶದಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 25 ರಕ್ತ ಚಂದನ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಬಂಧಿತರಾದವರನ್ನು ಆಂಧ್ರಪ್ರದೇಶದ ಪ್ರಕಾಸಂ ಜಿಲ್ಲೆಯ ಎಸ್.ರಾತಯ್ಯ, ಕೆ.ನಾರಾಯಣ, ಪಿ.ಪ್ರಸಾದ್, ಎ.ರಾತಯ್ಯ, ಕೆ.ವೆಂಕಟರೆಡ್ಡಿ ಹಾಗೂ ಮೈದುಕುರ್ ಮಂಡಲ್ ನ ಪಿ.ವಿಷ್ಣುವರ್ಧನ ರೆಡ್ಡಿ ಎಂದು ಗುರುತಿಸಲಾಗಿದೆ.

ರಕ್ತ ಚಂದನದ ಜೊತೆ ಅದನ್ನು ಕಟ್ಟಲು ಬಳಸುತ್ತಿದ್ದ ಉಪಕರಣ, ಹಗ್ಗ ಹಾಗೂ ಸಾಗಿಸಲು ಬಳಸಿದ ಸೈಕಲನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT