ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ (ಸಂಗ್ರಹ ಚಿತ್ರ) 
ದೇಶ

ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ಅಣ್ಣಾ ಹಜಾರೆ

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ....

ರಾಲೇಗಾಂವ್ ಸಿದ್ಧಿ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಇಂದು ಬೆಳಿಗ್ಗೆ ತಮ್ಮ ಸ್ವಗ್ರಾಮ ರಾಲೇಗಾಂವ್ ಸಿದ್ಧಿಯಲ್ಲಿರುವ ನಿವಾಸದಲ್ಲಿ ಸ್ನಾನಕ್ಕೆಂದು ಹೋಗಿದ್ದ ವೇಳೆ ಅತಿಯಾದ ಆಯಾಸವಾಗುತ್ತಿದೆ ಎಂದು ಹೇಳಿದ್ದಾರೆ. ಇದರಿಂದಾಗಿ ಅಹ್ಮದ್ ನಗರದ ಖಾಸಗಿ ಆಸ್ಪತ್ರೆಗೆ ಅಣ್ಣಾ ಹಜಾರೆಯವರನ್ನು ದಾಖಲಿಸಲಾಗಿದೆ.

ವೈದ್ಯರು ತಪಾಸಣೆ ನಡೆಸಿದಾಗ ಅಣ್ಣಾ ಹಜಾರೆಯವರು ಜ್ವರದಿಂದ ನರಳುತ್ತಿದ್ದು, ಡಿಹೈಡ್ರೇಷನ್(ನಿರ್ಜಲೀಕರಣ) ಸಮಸ್ಯೆಯಿರುವುದಾಗಿ ತಿಳಿದುಬಂದಿದೆ. ಪ್ರಸ್ತುತ ವೈದ್ಯರು ಅಣ್ಣಾ ಹಜಾರೆಯವರಿಗೆ ಚಿಕಿತ್ಸೆ ನೀಡುತ್ತಿದ್ದು, ಗುಣಮುಖರಾಗುತ್ತಿದ್ದಾರೆಂದು ತಿಳಿದುಬಂದಿದೆ.

ನನಗೆ ಯಾವುದೇ ತೊಂದರೆಯಾಗಿಲ್ಲ. ಸ್ವಲ್ಪ ಆಯಾಸವಾಗಿದೆಯಷ್ಟೇ ನಾನು ಚೆನ್ನಾಗಿದ್ದೇನೆಂದು ಅಣ್ಣಾ ಹಜಾರೆ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT