ಛೋಟಾ ರಾಜನ್ ಮತ್ತು ಛೋಟಾ ಶಕೀಲ್ (ಸಂಗ್ರಹ ಚಿತ್ರ) 
ದೇಶ

ಬಿಗಿ ಭದ್ರತೆಯ ತಿಹಾರ್ ಜೈಲಿನಲ್ಲೂ ಛೋಟಾರಾಜನ್ ಗೆ ಪ್ರಾಣ ಬೆದರಿಕೆ!

ವಿವಿಧ ಪಾತಕ ಕೃತ್ಯಗಳಲ್ಲಿ ಭಾಗಿಯಾಗಿ ಭಾರತದಲ್ಲಿ ಬಂಧನಕ್ಕೀಡಾಗಿರುವ ಭೂಗತ ಪಾತಕಿ ಛೋಟಾ ರಾಜನ್ ಗೆ ಬೆದರಿಕೆ ಸಂದೇಶ ಬಂದಿದ್ದು, ರಾಜನ್ ವೈರಿ ಮತ್ತು ಮತ್ತೋರ್ವ ಭೂಗತ ಪಾತಕಿ ದಾವೂದ್..

ನವದೆಹಲಿ: ವಿವಿಧ ಪಾತಕ ಕೃತ್ಯಗಳಲ್ಲಿ ಭಾಗಿಯಾಗಿ ಭಾರತದಲ್ಲಿ ಬಂಧನಕ್ಕೀಡಾಗಿರುವ ಭೂಗತ ಪಾತಕಿ ಛೋಟಾ ರಾಜನ್ ಗೆ ಬೆದರಿಕೆ ಸಂದೇಶ ಬಂದಿದ್ದು, ರಾಜನ್ ವೈರಿ ಮತ್ತು  ಮತ್ತೋರ್ವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನ ಬಲಗೈ ಬಂಟ ಛೋಟಾ ಶಕೀಲ್ ಈ ಸಂದೇಶ ರವಾನಿಸಿದ್ದಾನೆ ಎಂದು ತಿಳಿದುಬಂದಿದೆ.

ಛೋಟಾ ಶಕೀಲ್ ಪತ್ರದಲ್ಲಿ ಶೀಘ್ರದಲ್ಲೇ ನಿನ್ನನ್ನು ಮುಗಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಛೋಟಾ ಶಕೀಲ್ ಬೆದರಿಕೆ ಸಂದೇಶ ಇದೀಗ ದೇಶದ ಅತ್ಯಂತ ಭದ್ರತೆ  ಇರುವ ಜೈಲು ತಿಹಾರ್ ಜೈಲಿನ ಭದ್ರತಾ ವ್ಯವಸ್ಥೆಯನ್ನೇ ಪ್ರಶ್ನಿಸುತ್ತಿದೆ. ಮೂಲಗಳ ಪ್ರಕಾರ ತಿಹಾರ್ ಜೈಲಿನ ವಿಶೇಷ ಜೈಲು ವಿಭಾಗದ ಹಿರಿಯ ಅಧಿಕಾರಿಯೊಬ್ಬರ ಮೊಬೈಲ್ ಫೋನ್ ಗೆ  ಛೋಟಾ ಶಕೀಲ್ ತನ್ನ ಮೊಬೈಲ್ ಮೂಲಕ ಸಂದೇಶ ರವಾನಿಸಿದ್ದು, ಶೀಘ್ರದಲ್ಲಿಯೇ ರಾಜನ್ ನನ್ನು ಮುಗಿಸುವುದಾಗಿ ಹೇಳಿದ್ದಾನೆ.

"ಎಷ್ಟು ದಿನ ನೀವು ಸತ್ತ ಹಂದಿಯನ್ನು ಸಾವಿನಿಂದ ರಕ್ಷಿಸುತ್ತೀರಿ. ಶೀಘ್ರದಲ್ಲೇ ಆತನನ್ನು ಆತನ ಅಂತ್ಯವನ್ನು ನಾನು ನೋಡುತ್ತೇನೆ" ಎಂದು ಶಕೀಲ್ ಸಂದೇಶ ರವಾನಿಸಿದ್ದಾನೆ. ಕೇವಲ  ಎಸ್ಎಂಎಸ್ ಮಾತ್ರವಲ್ಲದೇ ಅದೇ ಹಿರಿಯ ಅಧಿಕಾರಿ ಮೊಬೈಲ್ ಗೆ ಕರೆಮಾಡಿರುವ ಶಕೀಲ್ ರಾಜನ್ ನನ್ನು ಮುಗಿಸಲು ತಂಡ ಸಿದ್ಧವಾಗಿದೆ ಎಂದು ಹೇಳಿದ್ದಾನೆ. ಈ ದೂರವಾಣಿ ಕರೆ ಬಳಿಕ  ರಾಜನ್ ನನ್ನು ಇಡಲಾಗಿರುವ ಜೈಲಿನ ಭದ್ರತೆ ಹೆಚ್ಚಿಸಲಾಗಿದೆ.

ದಶಕಗಳ ಕಾಲ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಛೋಟಾ ರಾಜನ್ ವಿರುದ್ಧ ಕೊಲೆ, ಸುಲಿಗೆ, ಬೆದರಿಕೆ, ಸುಪಾರಿ ನೀಡಿದ ಪ್ರಕರಣ ಸೇರಿದಂತೆ ಭಾರತದಲ್ಲಿ ಒಟ್ಟು 74  ಪ್ರಕರಣಗಳು ದಾಖಲಾಗಿದ್ದು, ಇಂಟರ್ ಪೋಲ್ ನಿಂದ ರೆಡ್ ಕಾರ್ನರ್ ನೋಟಿಸ್ ಕೂಡ ಪಡೆದಿದ್ದ. ಕಳೆದ ಅಕ್ಟೋಬರ್ ನಲ್ಲಿ ಭಾರತಕ್ಕೆ ಗಡಿಪಾರಾಗಿದ್ದ ಛೋಟಾರಾಜನ್ ನನ್ನು  ಇಂಡೋನೇಷ್ಯಾ ಪೊಲೀಸರು ಬಂಧಿಸಿದ್ದರು. ಪ್ರಸ್ತುತ ಛೋಟಾ ರಾಜನ್ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈ ಹಿಂದೆ ಮಹಾರಾಷ್ಟ್ರದ ಪೊಲೀಸರು ತನಿಖೆ ನಡೆಸುತ್ತಿದ್ದ  ರಾಜನ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT