ಹಮೀದ್ ಅನ್ಸಾರಿ 
ದೇಶ

ಟಿಎಂಸಿ ಸಂಸದನನ್ನು ಸದನದಿಂದ ಹೊರ ಹಾಕಿದ ಹಮೀದ್ ಅನ್ಸಾರಿ

ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಉಂಟಾದ ವಾಗ್ವಾದ ಸಂಬಂಧ ಟಿಎಂಸಿ ಸಂಸದನನ್ನು ಹೊರ ಹೋಗುವಂತೆ ...

ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ  ಉಂಟಾದ ವಾಗ್ವಾದ ಸಂಬಂಧ ಟಿಎಂಸಿ ಸಂಸದನನ್ನು ಹೊರ ಹೋಗುವಂತೆ ಸಭಾಪತಿ ಹಮೀದ್ ಅನ್ಸಾರಿ ಸೂಚಿಸಿರುವ ಘಟನೆ ನಡೆದಿದೆ. ಸುಖೇಂದು ಅವರನ್ನು ಹೊರಹೋಗಲು ಆದೇಶಿಸಿದ ಬೆನ್ನಲ್ಲೇ ಎಲ್ಲಾ ಟಿಎಂಸಿ ಸದಸ್ಯರೂ ಸದನದಿಂದ ಹೊರನಡೆದರು.

ಅಗಸ್ಟಾ ವೆಸ್ಟ್​ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಅವರು ಈಗಿಂದೀಗಲೇ ತುರ್ತು ಹೇಳಿಕೆ ನೀಡಬೇಕು ಎಂದು ಸುಖೇದು ಸೇಖರ್ ರಾಯ್ ಅವರು ತೀವ್ರವಾಗಿ ಆಗ್ರಹಿಸಿದರು. ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಅವರು ಬುಧವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳನ್ನು ಸದನದ ಮುಂದಿಡುವುದಾಗಿ ಪ್ರಕಟಿಸಿದ್ದಾರೆ. ಬಿಜೆಪಿ ನಾಯಕ, ರಾಜ್ಯಸಭೆಯ ನೂತನ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆ ಆರಂಭಿಸಿದ್ದು, ಬುಧವಾರ ಚರ್ಚೆ ಮುಂದುವರೆಸಲು ಎಲ್ಲಾ ಸದಸ್ಯರೂ ಒಪ್ಪಿಕೊಂಡಿದ್ದರು.

ಆದರೆ ಬುಧವಾರದವರೆಗೆ ಕಾಯಲು ಸಿದ್ಧರಿಲ್ಲದ ರಾಯ್ ಕಾಂಗ್ರೆಸ್ ಮತ್ತು ಬಿಜೆಪಿ ಎರಡರನ್ನೂ ಗುರಿಯಾಗಿಟ್ಟುಕೊಂಡು ‘ರಕ್ಷಣಾ ಸಚಿವರು ತುರ್ತಾಗಿ ಈದಿನವೇ ಹೇಳಿಕೆ ನೀಡಬೇಕು’ ಎಂದು ಆಗ್ರಹಿಸತೊಡಗಿದರು. ಅವರ ಆಗ್ರಹ ನಿರಂತರವಾದಾಗ ಸಭಾಪತಿಗಳು ಸದಸ್ಯನ ಮೇಲೆ ಒಂದು ದಿನದ ನಿಷೇಧ ಹೇರಿ ಸದನದಿಂದ ಹೊರನಡೆಯುವಂತೆ ಆಜ್ಞಾಪಿಸಿದರು.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT