ರಾಜನಾಥ್ ಸಿಂಗ್ 
ದೇಶ

ಉತ್ತರಾಖಂಡ್ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ: ರಾಜನಾಥ್ ಸಿಂಗ್

ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು...

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.
ಉತ್ತರಾಖಂಡ್ ಕಾಡ್ಗಿಚ್ಚಿನ ಬಗ್ಗೆ ಯಾರೂ ಆತಂಕಪಡಬೇಕಿಲ್ಲ. ಕಳೆದ ರಾತ್ರಿ ನಾನು ಪರಿಶೀಲನೆ ನಡೆಸಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ರಾಜನಾಥ್ ಸಿಂಗ್ ಅವರು ಇಂದು ಲೋಕಸಭೆಗೆ ತಿಳಿಸಿದ್ದಾರೆ.
ಕಾಡ್ಗಿಚ್ಚು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಅಲ್ಲದೆ ಮಾಹಿತಿ ತಿಳಿದ ಕೂಡಲೇ ಗೃಹ ಸಚಿವಾಲಯ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ ಎಂದರು.
ಇದೇ ವೇಳೆ ಕಾಡ್ಗಿಚ್ಚಿನ ಹಲವರು ಮೃತಪಟ್ಟಿದ್ದಾರೆ ಎಂಬ ವರದಿಯನ್ನು ಗೃಹ ಸಚಿವರು ತಳ್ಳಿಹಾಕಿದ್ದು, ಸಾವಿನ ಬಗ್ಗೆ ಸ್ಥಳೀಯ ಆಡಳಿತದಿಂದ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಹೇಳಿದರು.
ಶೂನ್ಯ ವೇಳೆಯಲ್ಲಿ ತೃಣಮೂಲಕ ಕಾಂಗ್ರೆಸ್ ನ ಸೌಗತ್ ರಾಯ್, ಬಿಜೆಪಿಯ ಜಗದಂಬಿಕಾ ಪಾಲ್ ಹಾಗೂ ಇತರೆ ಸದಸ್ಯರು ವಿಷಯ ಪ್ರಸ್ತಾಪಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹೆಸರು: ನೆಟ್ಟಿಗರಿಂದ ಟೀಕೆ

ಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್‌ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ